• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಒಂಟಿ ತೋಳ ಮಾದರಿ ದಾಳಿಗೆ ಮುಸ್ಲಿಂ ಉಗ್ರ ಸಂಘಟನೆಗಳ  ಸಂಚು

TNN Correspondent Posted On January 19, 2018
0


0
Shares
  • Share On Facebook
  • Tweet It

ದೆಹಲಿ: ಕಾಶ್ಮೀರ ಕಣಿವೆಯಲ್ಲಿ ಉಗ್ರ ಸಂಘಟನೆಗಳು ಮತ್ತು ಪ್ರತ್ಯೇಕವಾದಿಗಳ ಹೆಡೆ ಮುರಿ ಕಟ್ಟಿರುವ ಕೇಂದ್ರ ಸರ್ಕಾರ ಮತ್ತು ಸೈನ್ಯದ ಗಟ್ಟಿ ನಿಲುವು ಮುಸ್ಲಿಂ ಉಗ್ರ ಸಂಘಟನೆಗಳ ಅಸ್ತಿತ್ವವನ್ನೇ ಅಲುಗಾಡಿಸಿವೆ. ಆದರೂ ತಮ್ಮ ಕುತಂತ್ರ ಮುಂದುವರಿಸಿರುವ ಮುಸ್ಲಿಂ ಮೂಲಭೂತವಾದಿ ಸಂಘಟನೆಗಳು ಕಾಶ್ಮೀರ ಕಣಿವೆಯ ಯುವಕರಿಗೆ ತೀವ್ರಗಾಮಿ ಚಿಂತನೆಗಳನ್ನು ಬಿತ್ತಿ, ಒಂಟಿ ತೋಳದ ಮಾದರಿಯಲ್ಲಿ ದಾಳಿ ನಡೆಸುವ ಹುನ್ನಾರ ನಡೆಸಿವೆ ಎಂಬ ಮಾಹಿತಿ ಕೇಂದ್ರ ಗೃಹ ಇಲಾಖೆಯಿಂದಲೇ ಹೊರಬಿದ್ದಿದೆ.

ಐಎಸ್ ಐಎಸ್ ದುಷ್ಕೃತ್ಯ ತಡೆಗಟ್ಟಲು ಕೇಂದ್ರ ಗೃಹ ಇಲಾಖೆಯ ಸೈಬರ್ ವಿಭಾಗವು ಜಮ್ಮು ಕಾಶ್ಮೀರ ಪ್ರದೇಶದಲ್ಲಿ ಟೆಲಿಗ್ರಾಮ್ ನಲ್ಲಿ ಯುವಕರನ್ನು ಧರ್ಮದ ಹೆಸರಲ್ಲಿ ಪ್ರಚೋಧಿಸುವ ಲೇಖನ, ಚಿತ್ರಗಳ ಪ್ರಸಾರವನ್ನು ತಡೆಹಿಡಿದಿದೆ. ಈ ಮಾರ್ಗದ ಮೂಲಕ ಯುವಕರಲ್ಲಿ ಮೂಲಭೂತವಾದಿ ಚಿಂತನೆಗಳನ್ನು  ಬಿತ್ತಿ, ದುಷ್ಕೃತ್ಯಕ್ಕೆ ಸೆಳೆಯುವ ಸಂಚು ಐಎಸ್ ಐಎಸ್ ಹೂಡಿದೆ.

ಇತ್ತೀಚೆಗೆ ಸೈಬರ್ ವಿಂಗ್ ಐಸಿಸ್ ಪರವಾದ, ಯುವಕರನ್ನು ದುಷ್ಕೃತ್ಯಗಳಿಗೆ ಪ್ರಚೋಧಿಸುವ ಲೇಖನ, ಚಿತ್ರಗಳನ್ನು ಪ್ರಕಟಿಸುತ್ತಿದ್ದ ಟೆಲಿಗ್ರಾಮ್ ಚಾನಲ್ ವೊಂದನ್ನು ಪತ್ತೆ ಹಚ್ಚಿತ್ತು. ಅದರಲ್ಲಿ ಷರಿಯಾ ಕಾನೂನು ಜಾರಿ ಮಾಡುವ ಕುರಿತು ಯುವಕರಿಗೆ ಬೋಧಿಸಲಾಗುತ್ತಿತ್ತು. 23 ಸೆಪ್ಟೆಂಬರ್ 2017ರಂದು ಟೆಲಿಗ್ರಾಮ್ ಪ್ರಕಟಿಸಲಾಗಿದ್ದು, ಅದೇ ವರ್ಷ ಅಕ್ಟೋಬರ್ 3 ರಂದು ಹೊಸದಾಗಿ ಹೆಸರು ಬದಲಾಯಿಸಲಾಗಿದೆ.

ಕೇಂದ್ರ ಗೃಹ ಇಲಾಖೆ ವರದಿ ಪ್ರಕಾರ ‘ಟೆಲಿಗ್ರಾಮ್ ಚಾನೆಲ್ ನಲ್ಲಿ ಒಂಟಿ ತೋಳ ಮಾದರಿಯಲ್ಲಿ ಹೇಗೆ ದಾಳಿ ನಡೆಸಬೇಕು, ದಾಳಿಯಲ್ಲಿರಬೇಕಾದ ವರ್ತನೆಗಳು, ಬಾಂಬ್ ದಾಳಿಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಅಲ್ಲದೇ ಕಾಶ್ಮೀರದಲ್ಲಿ ಮುಸ್ಲಿಂ ರಾಷ್ಟ್ರಕ್ಕೆ ಬೆಂಬಲಿಸಿ ಎಂಬ ಹ್ಯಾಷ್ ಟ್ಯಾಗ್ ಕೂಡ ರಚಿಸಲಾಗಿದೆ. ಇದೇ ಮಾದರಿಯ ಹ್ಯಾಷ್ ಟ್ಯಾಗ್ ನ್ನು 2014ರಲ್ಲಿ ಇರಾಕ್ ಮತ್ತು ಸಿರಿಯಾದಲ್ಲಿ ಬಳಸಲಾಗಿತ್ತು. ಅದು ಭಾರಿ ಪರಿಣಾಮ ಬೀರಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆ ಹರಡುವ ಪೇಜ್ ಗಳ ಅಡ್ಮಿನ್ ಗಳ ಬಗ್ಗೆ ನಿಗಾಯಿರಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search