• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲಿಸಿದ ಮುಸ್ಲಿಂ ಮಹಿಳೆ ಮನೆಯ ಗತಿ ಏನಾಯ್ತು ಗೊತ್ತೆ..?

TNN Correspondent Posted On January 19, 2018


  • Share On Facebook
  • Tweet It

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ಕೋಟ್ಯಂತರ ಹಿಂದೂಗಳ ಬಹು ದಿನಗಳ ಕನಸು ಈಡೇರುವ ಕಾಲ ಸನ್ನಿಹಿತವಾಗಿದೆ. ಇತ್ತೀಚೆಗೆ ಮುಸ್ಲಿಂ ಬೋರ್ಡ್ ಕೂಡ ರಾಮಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಿತ್ತು. ಅದರಂತೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ನೀಡಿದ್ದಾರೆ ಎಂದು ಮುಸ್ಲಿಂ ದುರುಳರ ಗುಂಪೊಂದು ಮನೆಯ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದ್ದಾರೆ.

ಮುಸ್ಲಿಂ ಕಿರುಕುಳ ತಡೆಗಟ್ಟುವ ಸಂಸ್ಥೆಯ ಜಿಲ್ಲಾ ಮುಖ್ಯಸ್ಥೆ ಇಕ್ರಾ ಚೌದರಿ ದುರಳರ ದಾಳಿಗೆ ಒಳಗಾದವರು. ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಹಲವಾರು ಜನರು ಬೆದರಿಕೆ ಒಡ್ಡಿದಲ್ಲದೇ, ಅವರ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೇ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ.

ಡಿಸೆಂಬರ್ 6ರಂದು ಜಿಲ್ಲಾಧಿಕಾರಿಗಳಿಗೆ ರಾಮಮಂದಿರ ನಿರ್ಮಾಣಕ್ಕೆ ಬೆಂಬಲಿಸಿ ನಾವು ಮನವಿ ಪತ್ರ ಸಲ್ಲಿಸಿದ್ದೆ. ಆಗಿನಿಂದ ಹಾಪುರ್ ನಲ್ಲಿ ಬದುಕಬೇಕಾದರೆ ರಾಮಮಂದಿರ ವಿಷಯದಿಂದ ದೂರವಿರು ಎಂದು ಜೀವ ಬೆದರಿಕೆ ಒಡ್ಡಿದ್ದಾರೆ. ನನಗೆ ಹೆದರಿಕೆಯಾಗುತ್ತಿದೆ. ಅವರು ನನ್ನನ್ನು ಕೊಲ್ಲಬಹುದು ಎಂದು ಇಕ್ರಾ ಚೌದರಿ ಆತಂಕಕ್ಕೆ ಒಳಗಾಗಿದ್ದಾರೆ.

ಇಕ್ರಾ ಅವರ ಮನೆಯ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿರುವ ಮೂಲಭೂತವಾದಿಗಳು ‘ಈಗ ಹೇಳು ನಿನ್ನ ರಾಮನ ಹೆಸರನ್ನು’ ಎಂಬ ಸಂದೇಶವುಳ್ಳ ಚೀಟಿಯನ್ನು ಬಿಟ್ಟುಹೋಗಿದ್ದಾರೆ. ಇದರಿಂದ ಆತಂಕಗೊಂಡ ಇಕ್ರಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search