• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

2 ವರ್ಷದಲ್ಲಿ ಕಾಶ್ಮೀರ ಕಣಿವೆಯಲ್ಲಿ ಕಲ್ಲೆಸೆಯುತ್ತಿದ್ದ 11,290 ಜನರ ಬಂಧನ

TNN Correspondent Posted On January 19, 2018


  • Share On Facebook
  • Tweet It

ಜಮ್ಮು: ಕಾಶ್ಮೀರ ಪ್ರತ್ಯೇಕ ರಾಷ್ಟ್ರದ ನೆಪದಲ್ಲಿ ಕಣಿವೆ ರಾಜ್ಯದಲ್ಲಿ ಪೊಲೀಸರು, ಸೈನಿಕರು ಮತ್ತು ಅಧಿಕಾರಿಗಳ ಮೇಲೆ ಕಲ್ಲೆಸೆದು ಜನರ ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದ 11,290 ಜನರನ್ನು ಎರಡು ವರ್ಷದಲ್ಲಿ ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವಿಧಾನಸಭೆಗೆ ತಿಳಿಸಿದೆ.

ಬಿಜೆಪಿ ಶಾಸಕ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹೆಬೂಬಾ ಮುಫ್ತಿ ‘ಎರಡು ವರ್ಷದಲ್ಲಿ 11,290 ಜನರನ್ನು ಬಂಧಿಸಿದ್ದು,  ಕಲ್ಲು ಎಸೆಯುತ್ತಿದ್ದವರ ವಿರುದ್ಧ 3773 ಎಫ್ ಐ ಆರ್ ದಾಖಲಿಸಲಾಗಿದೆ. ಅದರಲ್ಲಿ ಕೆಲವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

2008 ರಿಂದ 2017ರ ವರೆಗೆ ಬಂಧಿಸಲಾಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಅದಕ್ಕೆ ಕೆಲವು ನಿಬಂಧನೆಗಳನ್ನು ಹೇರಲಾಗಿದೆ. ಪ್ರಕರಣದಲ್ಲಿ ದಾಖಲಾದವರ ಪೋಷಕರು ಮತ್ತೊಮ್ಮೆ ನಮ್ಮ ಮಕ್ಕಳನ್ನು ಇಂತಹ ಹೀನ ಕೃತ್ಯಕ್ಕೆ ಇಳಿಸುವುದಿಲ್ಲ ಎಂದು ಹೇಳಬೇಕು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಆರೋಪಿಗಳು ಹೇಳಬೇಕು. ಭವಿಷ್ಯದಲ್ಲಿ ಮತ್ತೆ ಇಂತಹ ಕಾರ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರೇ ಮಾತ್ರ ಅವರ ವಿರುದ್ಧ ಪ್ರಕರಣ ಹಿಂಪಡೆಯಲಾಗುವುದು ಎಂದು ತಿಳಿಸಿದರು.

ರಾಷ್ಟ್ರ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸುವ ಯುವಕರನ್ನು ಸಾಮಾಜದ ಮುನ್ನೆಲೆಗೆ ತರಬೇಕು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಯುವಕರನ್ನು ಮೂಲಭೂತವಾದಿಗಳತ್ತ ಸೆಳೆಯಲು ಸಾಮಾಜಿಕ ಜಾಲತಾಣ ಪ್ರಮುಖ ಪಾತ್ರ ವಹಿಸುತ್ತಿದೆ.

ಆಯಾ ಪೊಲೀಸ್ ಠಾಣೆಯಲ್ಲಿ ಗ್ರಾಮದ ಹಿರಿಯ ಸಭೆ ಕರೆದು ರಾಜ್ಯದ ಅಭಿವೃದ್ಧಿಗೆ ಯುವಕರ ಸೇವೆಯನ್ನು ಬಳಸಿಕೊಳ್ಳುವ ಕುರಿತು ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಯುವಕರು ಮೂಲಭೂತವಾದಿಗಳ ಹಿಡಿತದಿಂದ ಹೊರ ಬರಲು, ತಪ್ಪು ದಾರಿ ತುಳಿಯದಂತೆ ಕ್ರಮ ಕೈಗೊಳ್ಳಲು ಶ್ರಮಿಸಲಾಗುತ್ತಿದೆ ಎಂದು ಮುಫ್ತಿ ಹೇಳಿದರು.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search