• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತ್ ಸಿನಿಮಾ ನೋಡದಂತೆ ಅಸಾದುದ್ದೀನ್ ಓವೈಸಿ ಮುಸ್ಲಿಮರಿಗೆ ಕರೆ

TNN Correspondent Posted On January 20, 2018


  • Share On Facebook
  • Tweet It

ಹೈದರಾಬಾದ್: ದೇಶಾದ್ಯಂತ ಗಮನ ಸೆಳೆದಿರುವ, ವಿವಾದಗಳಿಂದಲೇ ಸುದ್ದಿಯಾಗಿರುವ ಪದ್ಮಾವತಿ ಚಿತ್ರಕ್ಕೆ ಕೇವಲ ರಜಪೂತರು ಮಾತ್ರವಲ್ಲ, ಮುಸ್ಲಿಂ ಮುಖಂಡರೂ ವಿರೋಧ ವ್ಯಕ್ತಪಡಿಸಿದ್ದಾರೆ.

ಪದ್ಮಾವತ್ ಸಿನಿಮಾ ಕಳಪೆಯಾಗಿದ್ದು, ಅದನ್ನು ಯಾವೊಬ್ಬ ಮುಸ್ಲಿಮರೂ ವೀಕ್ಷಿಸಬಾರದು ಎಂದು ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ.

ವಾರಂಗಲ್ ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಓವೈಸಿ, ಯಾವುದೇ ಮುಸ್ಲಿಮರು ಈ ಸುಳ್ಳಿನಿಂದ ಕೂಡಿದ ಚಿತ್ರವನ್ನು ವೀಕ್ಷಿಸಬಾರದು. ಎರಡು ತಾಸು ಕುಳಿತು ನೋಡುವಷ್ಟು ಸಿನಿಮಾ ಚೆನ್ನಾಗಿಲ್ಲ ಹಾಗೂ ದೇವರು ಈ ಸಿನಿಮಾ ಸೃಷ್ಟಿಸಿಲ್ಲ. ಹಾಗಾಗಿ ಸಿನಿಮಾ ವೀಕ್ಷಿಸಬಾರದು ಎಂದಿದ್ದಾರೆ.

ಅಲ್ಲದೆ ಪದ್ಮಾವತ್ ಚಿತ್ರ ಬಿಡುಗಡೆಗೆ ವಿರೋಧಿಸಿ ದೇಶಾದ್ಯಂತ ಒಗ್ಗಟ್ಟಾಗಿ ಹೋರಾಡಿದ ರಜಪೂತರ ಕುರಿತು ಮೆಚ್ಚುಗೆಯ ಮಾತನಾಡಿರುವ ಓವೈಸಿ, ಸಿನಿಮಾ ವಿರೋಧಿಸಿ ರಜಪೂತರು ಹೇಗೆ ಒಗ್ಗಟ್ಟಾಗಿ ಹೋರಾಡಿದರು ಎಂಬುದನ್ನು ಮುಸ್ಲಿಮರು ನೋಡಿ ಕಲಿತುಕೊಳ್ಳಬೇಕು ಎಂದು ಸಹ ಓವೈಸಿ ತಿಳಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂಬ ಆರೋಪವಿದ್ದು, ದೇಶಾದ್ಯಂತ ರಜಪೂತರು ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಬಳಿಕ ಪದ್ಮಾವತಿ ಇದ್ದ ಸಿನಿಮಾದ ಹೆಸರು ಪದ್ಮಾವತ್ ಆಯಿತು. ಈಗ ಸುಪ್ರೀಂ ಕೋರ್ಟ್ ಅನುಮತಿ ಮೇರೆಗೆ ಜನವರಿ 25ರಂದು ಸಿನಿಮಾ ಬಿಡುಗಡೆಯಾಗಲಿದೆ.

  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
Tulunadu News January 28, 2023
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
Leave A Reply

  • Recent Posts

    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
  • Popular Posts

    • 1
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 2
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 3
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search