• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತ್ ಸಿನಿಮಾ ನೋಡದಂತೆ ಅಸಾದುದ್ದೀನ್ ಓವೈಸಿ ಮುಸ್ಲಿಮರಿಗೆ ಕರೆ

TNN Correspondent Posted On January 20, 2018


  • Share On Facebook
  • Tweet It

ಹೈದರಾಬಾದ್: ದೇಶಾದ್ಯಂತ ಗಮನ ಸೆಳೆದಿರುವ, ವಿವಾದಗಳಿಂದಲೇ ಸುದ್ದಿಯಾಗಿರುವ ಪದ್ಮಾವತಿ ಚಿತ್ರಕ್ಕೆ ಕೇವಲ ರಜಪೂತರು ಮಾತ್ರವಲ್ಲ, ಮುಸ್ಲಿಂ ಮುಖಂಡರೂ ವಿರೋಧ ವ್ಯಕ್ತಪಡಿಸಿದ್ದಾರೆ.

ಪದ್ಮಾವತ್ ಸಿನಿಮಾ ಕಳಪೆಯಾಗಿದ್ದು, ಅದನ್ನು ಯಾವೊಬ್ಬ ಮುಸ್ಲಿಮರೂ ವೀಕ್ಷಿಸಬಾರದು ಎಂದು ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಕರೆ ನೀಡಿದ್ದಾರೆ.

ವಾರಂಗಲ್ ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಓವೈಸಿ, ಯಾವುದೇ ಮುಸ್ಲಿಮರು ಈ ಸುಳ್ಳಿನಿಂದ ಕೂಡಿದ ಚಿತ್ರವನ್ನು ವೀಕ್ಷಿಸಬಾರದು. ಎರಡು ತಾಸು ಕುಳಿತು ನೋಡುವಷ್ಟು ಸಿನಿಮಾ ಚೆನ್ನಾಗಿಲ್ಲ ಹಾಗೂ ದೇವರು ಈ ಸಿನಿಮಾ ಸೃಷ್ಟಿಸಿಲ್ಲ. ಹಾಗಾಗಿ ಸಿನಿಮಾ ವೀಕ್ಷಿಸಬಾರದು ಎಂದಿದ್ದಾರೆ.

ಅಲ್ಲದೆ ಪದ್ಮಾವತ್ ಚಿತ್ರ ಬಿಡುಗಡೆಗೆ ವಿರೋಧಿಸಿ ದೇಶಾದ್ಯಂತ ಒಗ್ಗಟ್ಟಾಗಿ ಹೋರಾಡಿದ ರಜಪೂತರ ಕುರಿತು ಮೆಚ್ಚುಗೆಯ ಮಾತನಾಡಿರುವ ಓವೈಸಿ, ಸಿನಿಮಾ ವಿರೋಧಿಸಿ ರಜಪೂತರು ಹೇಗೆ ಒಗ್ಗಟ್ಟಾಗಿ ಹೋರಾಡಿದರು ಎಂಬುದನ್ನು ಮುಸ್ಲಿಮರು ನೋಡಿ ಕಲಿತುಕೊಳ್ಳಬೇಕು ಎಂದು ಸಹ ಓವೈಸಿ ತಿಳಿಸಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂಬ ಆರೋಪವಿದ್ದು, ದೇಶಾದ್ಯಂತ ರಜಪೂತರು ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಬಳಿಕ ಪದ್ಮಾವತಿ ಇದ್ದ ಸಿನಿಮಾದ ಹೆಸರು ಪದ್ಮಾವತ್ ಆಯಿತು. ಈಗ ಸುಪ್ರೀಂ ಕೋರ್ಟ್ ಅನುಮತಿ ಮೇರೆಗೆ ಜನವರಿ 25ರಂದು ಸಿನಿಮಾ ಬಿಡುಗಡೆಯಾಗಲಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search