• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಅಶ್ವಮೇಧ ಕಟ್ಟಿಹಾಕಲು ಕಾಂಗ್ರೆಸ್ 2024ರವರೆಗೆ ಕಾಯಬೇಕು: ಪ್ರಕಾಶ್ ಅಂಬೇಡ್ಕರ್

TNN Correspondent Posted On January 20, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಎಂದು ಬಿಜೆಪಿ ರಾಷ್ಟ್ರಾಧ್ಯಂತ ಜಯಭೇರಿ ಭಾರಿಸುತ್ತಿದೆ. ಅದಕ್ಕೆ ಪೂರಕವಾಗಿ ಕಾಂಗ್ರೆಸ್ ಇನ್ನಷ್ಟು ಹೀನಾಯ ಸ್ಥಿತಿಗೆ ಇಳಿಯುತ್ತದೆ. 2024ರವರೆಗೆ ಕಾಂಗ್ರೆಸ್  ಅಧಿಕಾರಕ್ಕೇರುವುದು ಕಷ್ಟ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಗೆ ಆಗುವುದಿಲ್ಲ ಎಂದು ಹೇಳಿದವರು ಪ್ರಧಾನಿ ನರೇಂದ್ರ ಅವರ ಕೆಲವು ನಿರ್ಧಾರಗಳ ಕಟು ಟೀಕಿಸುತ್ತಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಮೊಮ್ಮಗ, ದಲಿತ ಮುಖಂಡ ಪ್ರಕಾಶ್ ಅಂಬೇಡ್ಕರ್.

ಮುಂಬೈ ಮರಾಠಿ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ರಹಿತ, ಸ್ವಚ್ಛ ವ್ಯಕ್ತಿತ್ವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲಿದೆ.  ಮಧ್ಯಪ್ರದೇಶ, ರಾಜಸ್ಥಾನ ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಜೊತೆಗೆ ಲೋಕಸಭೆ ಚುನಾವಣೆಯನ್ನು ಬಿಜೆಪಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಕೆಲವು ತಪ್ಪು ಮಾಡಿರಬಹುದು. ಆದರೆ ಭ್ರಷ್ಟಾಚಾರ ರಹಿತ ವ್ಯಕ್ತಿತ್ವ ಹೊಂದಿದ್ದಾರೆ. ಮೋದಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್‌’ನ ಹುಳುಕು ಎತ್ತಿತೋರಿಸುತ್ತಾರೆ. ಅದನ್ನು ಎದುರಿಸುವುದು ಕಾಂಗ್ರೆಸ್’ಗೆ ಸಾಧ್ಯವಿಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉತ್ತಮ ನಡತೆ ಹೊಂದಿದ್ದಾರೆ. ಆದರೆ, ಕಾಂಗ್ರೆಸ್‌’ನ ಇತರ ನಾಯಕರಿಗೆ ಅಂತಹ ವ್ಯಕ್ತಿತ್ವ ಇಲ್ಲ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌’ಗೆ ಸಾಧ್ಯವಾಗುತ್ತಿಲ್ಲ. 2024ರ ವರೆಗೂ ಕಾಂಗ್ರೆಸ್ ಬಿಜೆಪಿಯನ್ನು ಮಣಿಸಿ ಅಧಿಕಾರ ಹಿಡಿಯಲಾರದು ಎಂದು ಅಂಬೇಡ್ಕರ್ ಹೇಳಿದ್ದಾರೆ.

2019 ಲೋಕಸಭೆ ಚುನಾವಣೆಯಲ್ಲಿ ಪ್ರತಿ ಪಕ್ಷಗಳು ಬಿಜೆಪಿ ವಿರುದ್ಧ ಮಹಾಮೈತ್ರಿ ಮಾಡಿಕೊಂಡು ಒಗ್ಗಟ್ಟಾಗಿ ಹೋರಾಡಿದರೆ ರಾಜಕೀಯ ಚಿತ್ರಣ ಬದಲಾಗಬಹುದು. ಎಡಪಕ್ಷಗಳು ಮೋದಿ ಅವರ ಭ್ರಷ್ಟಾಚಾರ ರಹಿತ ವ್ಯಕ್ತಿತ್ವಕ್ಕೆ ಪೈಪೋಟಿ ನೀಡಬಲ್ಲವು.ಮಹಾಮೈತ್ರಿಯಾದರೆ ಬಿಜೆಪಿ ಸಂಖ್ಯೆ ಕುಸಿಯಬಹುದು. ಕರ್ನಾಟಕ ಚುನಾವಣಾ ಭವಿಷ್ಯ ದೆಹಲಿಯಲ್ಲಿ ಮುಂದಿನ ಸರ್ಕಾರವನ್ನು ನಿರ್ಧರಿಸುತ್ತದೆ ಎಂದು ಪ್ರಕಾಶ್ ಅಂಬೇಡ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಮೋದಿ ನಿಯಮಗಳ ವಿರೋಧಿ ಪ್ರಕಾಶ್ ಅಂಬೇಡ್ಕರ್: ಪ್ರಧಾನಿ ನರೇಂದ್ರ ಮೋದಿ ದಲಿತರನ್ನು ಓಲೈಸುವ ಯತ್ನವನ್ನು ಅಸ್ಪಷ್ಟ ಬೂಟಾಟಿಕೆ ಎಂದು ಪ್ರಕಾಶ್ ಅಂಬೇಡ್ಕರ್ ಟೀಕಿಸಿದ್ದರು. ಇತ್ತೀಚೆಗೆ ಭೀಮಾ-ಕೋರೆಗಾಂವ್ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರ ಬಂದ್‌’ಗೆ ಕರೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search