• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐಸಿಸ್ ಸೇರಿದ್ದ ಫಿಎಫ್ ಐ ಕಾರ್ಯಕರ್ತನ ಹತ್ಯೆ

TNN Correspondent Posted On January 20, 2018


  • Share On Facebook
  • Tweet It

ಕಣ್ಣೂರು: ಮೂಲಭೂತವಾದಕ್ಕೆ ಮಾರು ಹೋಗಿ ಐಸಿಸ್ ಸೇರಿದ್ದ, ಪಿಎಫ್ ಐ ಕಾರ್ಯಕರ್ತನಾಗಿದ್ದ  ಕೇರಳದ ಯುವಕನ್ನನ್ನು ಸಿರಿಯಾದಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಯುವಕ ಅಬ್ದುಲ್‌ ಮುನಾಫ್‌ ಉಗ್ರರ ಕ್ರೂರತನಕ್ಕೆ ಬಲಿಯಾದ ಯುವಕ. ಜನವರಿ 17ರಂದು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಕಣ್ಣೂರಿನಲ್ಲಿರುವ ಆತನ ಕುಟುಂಬ ಸದಸ್ಯರಿಗೆ ಆ್ಯಪ್‌ ಮೂಲಕ ಸಂದೇಶ ತಲುಪಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೇರಳದ ವಲಿಪಟ್ಟಿನಮ್ ಮೂಲದ ಯುವಕನ ಕುಟುಂಬಕ್ಕೆ ಟೆಲಿಗ್ರಾಮ್ ಮೂಲಕ ಜ.17ರಂದು ಸಾವಿಗಿಡಾಗಿದ್ದಾನೆ ಎಂಬ ಸಂದೇಶ ಬಂದಿದೆ. 2017ರ ನವೆಂಬರ್ ನಲ್ಲಿ ಐಸಿಸ್ ಸೇರಿದ್ದ ಯುವಕ ಮುನಾಫ್ ಸಾವಿನ ಬಗ್ಗೆ ಆತನ ಗೆಳೆಯ, ಸಿರಿಯಾದಲ್ಲಿ ಐಸಿಸ್ ಸೇರಿರುವ ಖಯಾಮ್ ಮಾಹಿತಿ ನೀಡಿದ್ದಾನೆ ಎಂದು ಡೆಪ್ಯುಟಿ ಸುಪರಿಂಟೆಡ್ ಆಫ್ ಪೊಲೀಸ್  ಪಿಪಿ ಸದಾನಂದನ್ ತಿಳಿಸಿದ್ದಾರೆ.

ಮನಾಫ್ ಕೇರಳದ ಮೂಲದ ಫಿಎಫ್ಐ ಸದಸ್ಯನಾಗಿದ್ದ. ಐಸಿಸ್ ಸೇರುವ ಮುಂಚಿನ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಪಿಎಫ್ಐ ಕಚೇರಿಯ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2009ರಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಕೊಲೆಯಲ್ಲೂ ಮನಾಫ್ ಭಾಗಿಯಾಗಿದ್ದ ಎನ್ನಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಪಾಸಪೋರ್ಟ್ ಸಿದ್ಧಪಡಿಸಿ ಸಿರಿಯಾಕೆ ಹೋಗಿದ್ದ. ಈತ ಹೋಗಿದ್ದ ಸಮಯದಲ್ಲೇ ಕೇರಳದಿಂದ ಸುಮಾರು 15 ಜನರು ಐಸಿಸ್ ಸೇರಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 100 ಯುವಕರು ಧರ್ಮಕ್ಕಾಗಿ ಹೋರಾಡುತ್ತೇನೆ ಎಂದು ಸಿರಿಯಾ, ಇರಾಕ್ ಗೆ ಹೋಗಿದ್ದಾರೆ. ಇವರು ಮನೆ ಬಿಟ್ಟಿರುವ ಕುರಿತು ಅವರ ಕುಟುಂಬದವರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search