• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಸೇರಿದ್ದ ಫಿಎಫ್ ಐ ಕಾರ್ಯಕರ್ತನ ಹತ್ಯೆ

TNN Correspondent Posted On January 20, 2018
0


0
Shares
  • Share On Facebook
  • Tweet It

ಕಣ್ಣೂರು: ಮೂಲಭೂತವಾದಕ್ಕೆ ಮಾರು ಹೋಗಿ ಐಸಿಸ್ ಸೇರಿದ್ದ, ಪಿಎಫ್ ಐ ಕಾರ್ಯಕರ್ತನಾಗಿದ್ದ  ಕೇರಳದ ಯುವಕನ್ನನ್ನು ಸಿರಿಯಾದಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಯುವಕ ಅಬ್ದುಲ್‌ ಮುನಾಫ್‌ ಉಗ್ರರ ಕ್ರೂರತನಕ್ಕೆ ಬಲಿಯಾದ ಯುವಕ. ಜನವರಿ 17ರಂದು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಕಣ್ಣೂರಿನಲ್ಲಿರುವ ಆತನ ಕುಟುಂಬ ಸದಸ್ಯರಿಗೆ ಆ್ಯಪ್‌ ಮೂಲಕ ಸಂದೇಶ ತಲುಪಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೇರಳದ ವಲಿಪಟ್ಟಿನಮ್ ಮೂಲದ ಯುವಕನ ಕುಟುಂಬಕ್ಕೆ ಟೆಲಿಗ್ರಾಮ್ ಮೂಲಕ ಜ.17ರಂದು ಸಾವಿಗಿಡಾಗಿದ್ದಾನೆ ಎಂಬ ಸಂದೇಶ ಬಂದಿದೆ. 2017ರ ನವೆಂಬರ್ ನಲ್ಲಿ ಐಸಿಸ್ ಸೇರಿದ್ದ ಯುವಕ ಮುನಾಫ್ ಸಾವಿನ ಬಗ್ಗೆ ಆತನ ಗೆಳೆಯ, ಸಿರಿಯಾದಲ್ಲಿ ಐಸಿಸ್ ಸೇರಿರುವ ಖಯಾಮ್ ಮಾಹಿತಿ ನೀಡಿದ್ದಾನೆ ಎಂದು ಡೆಪ್ಯುಟಿ ಸುಪರಿಂಟೆಡ್ ಆಫ್ ಪೊಲೀಸ್  ಪಿಪಿ ಸದಾನಂದನ್ ತಿಳಿಸಿದ್ದಾರೆ.

ಮನಾಫ್ ಕೇರಳದ ಮೂಲದ ಫಿಎಫ್ಐ ಸದಸ್ಯನಾಗಿದ್ದ. ಐಸಿಸ್ ಸೇರುವ ಮುಂಚಿನ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಪಿಎಫ್ಐ ಕಚೇರಿಯ ಕಾರ್ಯದರ್ಶಿಯಾಗಿ ನಿರ್ವಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2009ರಲ್ಲಿ ಸಿಪಿಐ(ಎಂ) ಕಾರ್ಯಕರ್ತನ ಕೊಲೆಯಲ್ಲೂ ಮನಾಫ್ ಭಾಗಿಯಾಗಿದ್ದ ಎನ್ನಲಾಗಿದೆ. ಸುಳ್ಳು ದಾಖಲೆಗಳನ್ನು ನೀಡಿ, ಪಾಸಪೋರ್ಟ್ ಸಿದ್ಧಪಡಿಸಿ ಸಿರಿಯಾಕೆ ಹೋಗಿದ್ದ. ಈತ ಹೋಗಿದ್ದ ಸಮಯದಲ್ಲೇ ಕೇರಳದಿಂದ ಸುಮಾರು 15 ಜನರು ಐಸಿಸ್ ಸೇರಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 100 ಯುವಕರು ಧರ್ಮಕ್ಕಾಗಿ ಹೋರಾಡುತ್ತೇನೆ ಎಂದು ಸಿರಿಯಾ, ಇರಾಕ್ ಗೆ ಹೋಗಿದ್ದಾರೆ. ಇವರು ಮನೆ ಬಿಟ್ಟಿರುವ ಕುರಿತು ಅವರ ಕುಟುಂಬದವರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search