• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ 414 ಕೋಟಿ ರುಪಾಯಿ ದಂಡ!

TNN Correspondent Posted On January 20, 2018


  • Share On Facebook
  • Tweet It

ದೆಹಲಿ: ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿರುವ ಮಧ್ಯೆಯೇ ನ್ಯಾಷನಲ್ ಹೆರಾಲ್ಡ್ ಹಗರಣ ಪ್ರಕರಣ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಕುತ್ತಾಗುವ ಎಲ್ಲ ಲಕ್ಷಣ ಗೋಚರಿಸಿವೆ.

ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಒಡೆತನದ ಯಂಗ್ ಇಂಡಿಯನ್ ಕಂಪನಿಗೆ ಆದಾಯ ತೆರಿಗೆ ಇಲಾಖೆ 414 ಕೋಟಿ ರು. ದಂಡ ವಿಧಿಸಿದೆ ಎಂದು ಬಿಜೆಪಿ ಸಂಸದ, ಮುಖಂಡ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈ ಕೋರ್ಟ್ ಗೆ ತಿಳಿಸಿದ್ದು, ಸಂಚಲನ ಮೂಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಂಬಿಕಾ ಸಿಂಗ್ ಎದುರು ಹಾಜರಾದ ಸುಬ್ರಮಣಿಯನ್ ಸ್ವಾಮಿ, ಸೋನಿಯಾ, ರಾಹುಲ್ ಗಾಂಧಿ ಹಾಗೂ ಕಂಪನಿಯ ನಾಲ್ವರ ವಿರುದ್ಧ ನಾನು ನೀಡಿದ ದೂರಿನಂತೆ ಐಟಿ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ವಿವರಿಸಿದರು.

ಐಟಿ ಇಲಾಖೆ ತನಿಖೆ ನಡೆಸುತ್ತಿರುವ ಹಾಗೂ ದಂಡ ವಿಧಿಸಿರುವ ಕುರಿತು ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ದಾಖಲೆ ಪಡೆದ ಮ್ಯಾಜಿಸ್ಟ್ರೇಟ್ ಅಂಬಿಕಾ ಸಿಂಗ್, ನ್ಯಾಯಾಲಯದ ಮುಂದಿನ ಆದೇಶದವರೆಗೂ ಸೀಲ್ ಹಾಕಿದ ಲಕೋಟೆಯಲ್ಲಿ ಇಡುವಂತೆ ಸೂಚಿಸಿದರು.

ಜವಾಹರ್ ಲಾಲ್ ನೆಹರೂ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆರಂಭಿಸಿದ್ದು, ಗಾಂಧಿ ಕುಟುಂಬದವರು ಪತ್ರಿಕೆಗಾಗಿ ಸರ್ಕಾರದ ಹಣ ಬಳಸಿದ್ದಾರೆ ಎಂದು ಆರೋಪಿಸಿ ಸುಬ್ರಮಣಿಯನ್ ಸ್ವಾಮಿ ದೂರು ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರಿಗೆ ಐಟಿ ಇಲಾಖೆ ಅಧಿಕಾರಿಗಳು 414 ಕೋಟಿ ರುಪಾಯಿ ದಂಡ ವಿಧಿಸಿದ್ದೇ ನಿಜವಾಗಿದ್ದರೆ, ದೇಶದಲ್ಲಿ ಕಾಂಗ್ರೆಸ್ಸಿನ ಈ ಇಬ್ಬರು ನಾಯಕರ ಹೆಸರು ಹಾಳಾಗುವುದರಲ್ಲಿ ಎರಡು ಮಾತಿಲ್ಲ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search