• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಲ್ಲಿ ಪಾಕ್ ಯುದ್ಧೋತ್ಸಾಹ 4 ಯೋಧರು ಹುತಾತ್ಮ, 6 ಸಾರ್ವಜನಿಕರ ಸಾವು

TNN Correspondent Posted On January 21, 2018
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಪುಂಡಾಟ ಮುಂದುವರಿಸಿದೆ. ಪಾಕ್ ಪಾತಕತನ ನಾಲ್ಕನೇ ದಿನ ತಲುಪಿದ್ದು, ನಾಲ್ವರು ಯೋಧರು, 6 ಸಾರ್ವಜನಿಕರು ಸೇರಿ 10 ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಸೈನ್ಯ ಕಾಶ್ಮೀರದ ಸಂಬಾ, ಕತುವಾ, ರಜೌರಿ ಹಾಗೂ ಜಮ್ಮು ಗಡಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಇಬ್ಬರು ಭಾರತೀಯ ಯೋಧರು ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. 35 ಜನರು ಗಾಯಗೊಂಡಿದ್ದರು. ಬುಧವಾರ ನಡೆದ ದಾಳಿಯಲ್ಲಿ ಬಿಎಸ್ ಎಫ್ ಯೋಧ ಹಾಗೂ ಒಬ್ಬ ಬಾಲಕಿ ಬಲಿಯಾಗಿ, 8 ಜನರಿಗೆ ಗಾಯಗಳಾಗಿದ್ದವು.

ಪಾಕಿಸ್ತಾನದವರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಅಲಂಪೂರದ 23 ವರ್ಷದ ಯಧ ಮನದೀಪ್ ಸಿಂಗ್ ಹುತಾತ್ಮರಾಗಿದ್ದಾರೆ. ಶನಿವಾರವೂ ಪಾಕಿಸ್ತಾನ ತನ್ನ ನೀಚತನ ಮುಂದುವರಿಸಿದೆ.ಜಮ್ಮು ಕಾನಚಕ್ ವಲಯದ ಗಜನ್ಸೂ ಪ್ರದೇಶದಲ್ಲಿ ಶೆಲ್ ದಾಳಿಗೆ ಮೂವರು ಮೃತಪಟ್ಟಿದ್ದರು.

ಗಡಿಯಲ್ಲಿ ಯುದ್ಧದ ವಾತಾವರಣ, ರೆಡ್ ಅಲರ್ಟ್ ಘೋಷಣೆ

ಪಾಕಿಸ್ತಾನದ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.  ಪಾಕಿಸ್ತಾನದ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಿಗೆ ತೆರಳುವಂತೆ ಸಾರ್ವಜನಿಕರಿಗೆ ಭಾರತೀಯ ಅಧಿಕಾರಿಗಳು ಸೂಚಿಸಿದ್ದಾರೆ. ಪಾಕಿಸ್ತಾನದ ಪುಂಡಾಟಕ್ಕೆ ಭಯಭೀತರಾಗಿರುವ 10 ಸಾವಿರ ಜನರು ಗಡಿ ಪ್ರದೇಶದಿಂದ ವಲಸೆ ಹೋಗಿದ್ದಾರೆ ಎನ್ನಲಾಗಿದೆ. ಗಡಿಯಲ್ಲಿ ಯುದ್ಧದ ವಾತಾವರ ನಿರ್ಮಾಣವಾಗಿದ್ದರಿಂದ ಗಡಿಯಲ್ಲಿರುವ 300 ಶಾಲೆಗಳನ್ನು ಮುಚ್ಚಲು ಸೂಚಿಸಲಾಗಿದೆ.

ಆರೋಗ್ಯ ಇಲಾಖೆಯಿಂದ ಭಾರಿ ಸಿದ್ಧತೆ

ಗಡಿಯಲ್ಲಿ ನಿರಂತರವಾಗಿ ಪಾಕ್ ಅಪ್ರಚೋಧಿತ ದಾಳಿ ನಡೆಸುತ್ತಿರುವುದರಿಂದ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ಕೈಗೊಂಡಿದ್ದೆ. ತುರ್ತು ಚಿಕಿತ್ಸೆಗೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಹೆಚ್ಚುವರಿಯಾಗಿ 197 ಆ್ಯಂಬುಲೆನ್ಸ್ ಗಳನ್ನು ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search