• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಲ್ಲಿ ಪಾಕ್ ಯುದ್ಧೋತ್ಸಾಹ 4 ಯೋಧರು ಹುತಾತ್ಮ, 6 ಸಾರ್ವಜನಿಕರ ಸಾವು

TNN Correspondent Posted On January 21, 2018
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಪುಂಡಾಟ ಮುಂದುವರಿಸಿದೆ. ಪಾಕ್ ಪಾತಕತನ ನಾಲ್ಕನೇ ದಿನ ತಲುಪಿದ್ದು, ನಾಲ್ವರು ಯೋಧರು, 6 ಸಾರ್ವಜನಿಕರು ಸೇರಿ 10 ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಸೈನ್ಯ ಕಾಶ್ಮೀರದ ಸಂಬಾ, ಕತುವಾ, ರಜೌರಿ ಹಾಗೂ ಜಮ್ಮು ಗಡಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಇಬ್ಬರು ಭಾರತೀಯ ಯೋಧರು ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. 35 ಜನರು ಗಾಯಗೊಂಡಿದ್ದರು. ಬುಧವಾರ ನಡೆದ ದಾಳಿಯಲ್ಲಿ ಬಿಎಸ್ ಎಫ್ ಯೋಧ ಹಾಗೂ ಒಬ್ಬ ಬಾಲಕಿ ಬಲಿಯಾಗಿ, 8 ಜನರಿಗೆ ಗಾಯಗಳಾಗಿದ್ದವು.

ಪಾಕಿಸ್ತಾನದವರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಅಲಂಪೂರದ 23 ವರ್ಷದ ಯಧ ಮನದೀಪ್ ಸಿಂಗ್ ಹುತಾತ್ಮರಾಗಿದ್ದಾರೆ. ಶನಿವಾರವೂ ಪಾಕಿಸ್ತಾನ ತನ್ನ ನೀಚತನ ಮುಂದುವರಿಸಿದೆ.ಜಮ್ಮು ಕಾನಚಕ್ ವಲಯದ ಗಜನ್ಸೂ ಪ್ರದೇಶದಲ್ಲಿ ಶೆಲ್ ದಾಳಿಗೆ ಮೂವರು ಮೃತಪಟ್ಟಿದ್ದರು.

ಗಡಿಯಲ್ಲಿ ಯುದ್ಧದ ವಾತಾವರಣ, ರೆಡ್ ಅಲರ್ಟ್ ಘೋಷಣೆ

ಪಾಕಿಸ್ತಾನದ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.  ಪಾಕಿಸ್ತಾನದ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಿಗೆ ತೆರಳುವಂತೆ ಸಾರ್ವಜನಿಕರಿಗೆ ಭಾರತೀಯ ಅಧಿಕಾರಿಗಳು ಸೂಚಿಸಿದ್ದಾರೆ. ಪಾಕಿಸ್ತಾನದ ಪುಂಡಾಟಕ್ಕೆ ಭಯಭೀತರಾಗಿರುವ 10 ಸಾವಿರ ಜನರು ಗಡಿ ಪ್ರದೇಶದಿಂದ ವಲಸೆ ಹೋಗಿದ್ದಾರೆ ಎನ್ನಲಾಗಿದೆ. ಗಡಿಯಲ್ಲಿ ಯುದ್ಧದ ವಾತಾವರ ನಿರ್ಮಾಣವಾಗಿದ್ದರಿಂದ ಗಡಿಯಲ್ಲಿರುವ 300 ಶಾಲೆಗಳನ್ನು ಮುಚ್ಚಲು ಸೂಚಿಸಲಾಗಿದೆ.

ಆರೋಗ್ಯ ಇಲಾಖೆಯಿಂದ ಭಾರಿ ಸಿದ್ಧತೆ

ಗಡಿಯಲ್ಲಿ ನಿರಂತರವಾಗಿ ಪಾಕ್ ಅಪ್ರಚೋಧಿತ ದಾಳಿ ನಡೆಸುತ್ತಿರುವುದರಿಂದ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ಕೈಗೊಂಡಿದ್ದೆ. ತುರ್ತು ಚಿಕಿತ್ಸೆಗೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಹೆಚ್ಚುವರಿಯಾಗಿ 197 ಆ್ಯಂಬುಲೆನ್ಸ್ ಗಳನ್ನು ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search