• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ಬೆಂಬಲಿಸುವವರೇ, ಗರ್ಭಿಣಿಗೆ ತ್ರಿವಳಿ ತಲಾಖ್ ನೀಡಿದ್ದನ್ನು ಏನಂತೀರಿ?

TNN Correspondent Posted On January 21, 2018
0


0
Shares
  • Share On Facebook
  • Tweet It

ಲಖನೌ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ವಿರುದ್ಧ ಮಸೂದೆ ಮಂಡಿಸಿದಾಗ ಅಸಾದುದ್ದೀನ್ ಓವೈಸಿಯಂಥ ಕೆಲ ನಾಯಕರು ಹಾಗೂ ಕೆಲ ಮುಸ್ಲಿಂ ಮುಖಂಡರು ಇದು ಷರಿಯಾ ವಿರುದ್ಧದ ಕಾನೂನು, ಮುಸ್ಲಿಮರ ಭಾವನೆಗಳ ವಿರುದ್ಧ ಜಾರಿಗೆ ತಂದ ಕಾನೂನು ಎಂದೆಲ್ಲ ಬೊಬ್ಬೆ ಹಾಕಿದರು.

ಆದರೂ ಮುಸ್ಲಿಂ ಮಹಿಳೆಯರಿಗೆ ತ್ರಿವಳಿ ತಲಾಖ್ ನೀಡಿ ಶೋಷಣೆ ಮಾಡುತ್ತಿರುವುದು ಮುಂದುವರಿದಿದ್ದು, ದುರದೃಷ್ಟವಶಾತ್ ಅವರ ಪರ ನಿಲ್ಲಲು ಯಾವ ಮುಸ್ಲಿಮರು, ಮಹಿಳಾ ಹೋರಾಟಗಾರರು, ಬುದ್ಧಿ ಜೀವಿಗಳು ಮುಂದೆ ಬರದಿರುವುದು ಬೇಸರದ ಸಂಗತಿಯಾಗಿದೆ.

ಹೌದು, ಉತ್ತರ ಪ್ರದೇಶದ ಮೊರಾದಾಬದ್ ನಲ್ಲಿ ಮುಸ್ಲಿಂ ಗರ್ಭಿಣಿಯೊಬ್ಬರಿಗೆ ವರದಕ್ಷಿಣೆ ಕಾರಣಕ್ಕಾಗಿ ಆಕೆಯ ಪತಿ ತ್ರಿವಳಿ ತಲಾಖ್ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಇದರ ವಿರುದ್ಧ ಯಾರೂ ಧ್ವನಿ ಎತ್ತುತ್ತಿಲ್ಲ.

ಎಂಟು ತಿಂಗಳ ಹಿಂದೆ ಜೆಬಾ ಕಹ್ತುನ್ ಎಂಬ ಮಹಿಳೆ ಸೊಹೈಬ್ ಎಂಬಾತನನ್ನು ಮದುವೆಯಾಗಿದ್ದು, ಪ್ರಸ್ತುತ ಗರ್ಭಿಣಿಯಾಗಿದ್ದಾರೆ. ಆದರೆ ತಂದೆಯಾದೆ ಎನ್ನುವ ಖುಷಿ ಮರೆತ ಸೊಹೈಬ್ “ತವರು ಮನೆಯಿಂದ ಹೊಸ ಬೈಕ್ ತೆಗೆದುಕೊಂಡು ಬಾ ಎಂದು ಒತ್ತಾಯಿಸಿದ್ದಾನೆ. ತರಲು ಒಪ್ಪದ ಕಾರಣ ಕುಡಿದು ಮೊಬೈಲಿನಲ್ಲಿ ತ್ರಿವಳಿ ತಲಾಖ್ ನೀಡಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

ವರದಕ್ಷಿಣೆ ತರಲು ನಿರಾಕರಿಸಿದ್ದಕ್ಕಾಗಿ ತಲಾಖ್ ನೀಡಿದ್ದಾಗಿ ಮಹಿಳೆ ನೀಡಿದ ದೂರಿನ ಅನ್ವಯ ಸೊಹೈಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಎಸ್ಪಿ ರಾಯಿಸ್ ಅಖ್ತರ್ ಮಾಹಿತಿ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ಕಳೆದ ಚಳಿಗಾಲದ ಅಧಿವೇಶನದಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಗೊಳಿಸಲು ಲೋಕಸಭೆಯಲ್ಲಿ ಮಸೂದೆ ಮಂಡಿಸಿ, ಅಂಗೀಕಾರ ಪಡೆದಿದೆ. ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಯಾದರೆ, ತಲಾಖ್ ನೀಡುವ ಪತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search