• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿವಳಿ ತಲಾಖ್ ಬೆಂಬಲಿಸುವವರೇ, ಗರ್ಭಿಣಿಗೆ ತ್ರಿವಳಿ ತಲಾಖ್ ನೀಡಿದ್ದನ್ನು ಏನಂತೀರಿ?

TNN Correspondent Posted On January 21, 2018


  • Share On Facebook
  • Tweet It

ಲಖನೌ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ವಿರುದ್ಧ ಮಸೂದೆ ಮಂಡಿಸಿದಾಗ ಅಸಾದುದ್ದೀನ್ ಓವೈಸಿಯಂಥ ಕೆಲ ನಾಯಕರು ಹಾಗೂ ಕೆಲ ಮುಸ್ಲಿಂ ಮುಖಂಡರು ಇದು ಷರಿಯಾ ವಿರುದ್ಧದ ಕಾನೂನು, ಮುಸ್ಲಿಮರ ಭಾವನೆಗಳ ವಿರುದ್ಧ ಜಾರಿಗೆ ತಂದ ಕಾನೂನು ಎಂದೆಲ್ಲ ಬೊಬ್ಬೆ ಹಾಕಿದರು.

ಆದರೂ ಮುಸ್ಲಿಂ ಮಹಿಳೆಯರಿಗೆ ತ್ರಿವಳಿ ತಲಾಖ್ ನೀಡಿ ಶೋಷಣೆ ಮಾಡುತ್ತಿರುವುದು ಮುಂದುವರಿದಿದ್ದು, ದುರದೃಷ್ಟವಶಾತ್ ಅವರ ಪರ ನಿಲ್ಲಲು ಯಾವ ಮುಸ್ಲಿಮರು, ಮಹಿಳಾ ಹೋರಾಟಗಾರರು, ಬುದ್ಧಿ ಜೀವಿಗಳು ಮುಂದೆ ಬರದಿರುವುದು ಬೇಸರದ ಸಂಗತಿಯಾಗಿದೆ.

ಹೌದು, ಉತ್ತರ ಪ್ರದೇಶದ ಮೊರಾದಾಬದ್ ನಲ್ಲಿ ಮುಸ್ಲಿಂ ಗರ್ಭಿಣಿಯೊಬ್ಬರಿಗೆ ವರದಕ್ಷಿಣೆ ಕಾರಣಕ್ಕಾಗಿ ಆಕೆಯ ಪತಿ ತ್ರಿವಳಿ ತಲಾಖ್ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಇದರ ವಿರುದ್ಧ ಯಾರೂ ಧ್ವನಿ ಎತ್ತುತ್ತಿಲ್ಲ.

ಎಂಟು ತಿಂಗಳ ಹಿಂದೆ ಜೆಬಾ ಕಹ್ತುನ್ ಎಂಬ ಮಹಿಳೆ ಸೊಹೈಬ್ ಎಂಬಾತನನ್ನು ಮದುವೆಯಾಗಿದ್ದು, ಪ್ರಸ್ತುತ ಗರ್ಭಿಣಿಯಾಗಿದ್ದಾರೆ. ಆದರೆ ತಂದೆಯಾದೆ ಎನ್ನುವ ಖುಷಿ ಮರೆತ ಸೊಹೈಬ್ “ತವರು ಮನೆಯಿಂದ ಹೊಸ ಬೈಕ್ ತೆಗೆದುಕೊಂಡು ಬಾ ಎಂದು ಒತ್ತಾಯಿಸಿದ್ದಾನೆ. ತರಲು ಒಪ್ಪದ ಕಾರಣ ಕುಡಿದು ಮೊಬೈಲಿನಲ್ಲಿ ತ್ರಿವಳಿ ತಲಾಖ್ ನೀಡಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

ವರದಕ್ಷಿಣೆ ತರಲು ನಿರಾಕರಿಸಿದ್ದಕ್ಕಾಗಿ ತಲಾಖ್ ನೀಡಿದ್ದಾಗಿ ಮಹಿಳೆ ನೀಡಿದ ದೂರಿನ ಅನ್ವಯ ಸೊಹೈಬ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಎಸ್ಪಿ ರಾಯಿಸ್ ಅಖ್ತರ್ ಮಾಹಿತಿ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ಕಳೆದ ಚಳಿಗಾಲದ ಅಧಿವೇಶನದಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಗೊಳಿಸಲು ಲೋಕಸಭೆಯಲ್ಲಿ ಮಸೂದೆ ಮಂಡಿಸಿ, ಅಂಗೀಕಾರ ಪಡೆದಿದೆ. ತ್ರಿವಳಿ ತಲಾಖ್ ವಿರುದ್ಧ ಕಾನೂನು ಜಾರಿಯಾದರೆ, ತಲಾಖ್ ನೀಡುವ ಪತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search