• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡ ಎಸ್ಪಿ ಸುಧೀರ್ ವರ್ಗಾವಣೆ, ಸಿಎಂ ಸಾಹೇಬ್ರೇ ದಕ್ಷ ಅಧಿಕಾರಿಗಳು ಬೇಡವೇ ನಿಮಗೆ?

TNN Correspondent Posted On January 21, 2018
0


0
Shares
  • Share On Facebook
  • Tweet It

ಮಂಗಳೂರು: ಸಿ.ಶಿಖಾ, ಅನುಪಮಾ ಶೆಣೈ, ಎಂ.ಕೆ.ಗಣಪತಿ ವರ್ಗಾವಣೆ ವಿಷಯದಲ್ಲಿ ರಾಜ್ಯ ಸರ್ಕಾರದ ಮನೋಭಾವನೆ ಜನರಿಗೆ ಗೊತ್ತಾಗಿದ್ದು ಹಳೇ ವಿಷಯ. ಈಗ ಅಂಥಾದ್ದೇ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರದ ದಕ್ಷ ಅಧಿಕಾರಿಗಳ ಮೇಲೆ ಕೆಂಗಣ್ಣು ಬೀರಿರುವುದು ಬಹಿರಂಗವಾಗಿದೆ.

ಹೌದು, ದಕ್ಷಿಣ ಕನ್ನಡದ ಎಸ್ಪಿಯಾಗಿ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದ್ದ ಸುಧೀರ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ನೂತನ ಎಸ್ಪಿಯಾಗಿ ಬೆಳಗಾವಿ ಎಸ್ಪಿ ಡಾ.ರವಿಕಾಂತೇಗೌಡ ಅವರನ್ನು ಶೀಘ್ರವೇ ನೇಮಿಸಲಾಗಿದೆ.

ಇದೆಲ್ಲ ಏನನ್ನು ತೋರಿಸುತ್ತದೆ. ಯಾವುದೇ ಒಬ್ಬ ಎಸ್ಪಿ ಬೇರೆ ಜಿಲ್ಲೆಗೆ ವರ್ಗಾವಣೆಯಾದರೆ ಅಲ್ಲಿನ ಪರಿಸ್ಥಿತಿ ಅರಿತು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಮಯ ಬೇಕಾಗುತ್ತದೆ. ಮೊದಲೇ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಏನು ಮಾಡಲು ಹೊರಟಿದೆ ಎಂದು ದಕ್ಷಿಣ ಕನ್ನಡದ ಜನ ಪ್ರಶ್ನಿಸುತ್ತಿದ್ದಾರೆ.

ಬಂಟ್ವಾಳದಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣ ಭೇದಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾದ್ಯಂತ ದಕ್ಷ ಅಧಿಕಾರಿ ಎಂಬ ಹೆಸರು ಗಳಿಸಿದ್ದರು. ಅಷ್ಟೇ ಅಲ್ಲದೆ ಹಲವು ಪ್ರಕರಣ, ರೌಡಿಸಂ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಹೀಗಿದ್ದರೂ ಭೂಷಣ ರಾವ್ ಬೊರಸೆ ಅವರಂತೆ ಮತ್ತೊಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ದಕ್ಷ ಅಧಿಕಾರಿಗಳು ತಮಗೆ ಬೇಡ ಎಂಬ ಸಂದೇಶ ರವಾನಿಸಿದ್ದು ಸರಿಯಲ್ಲ ಎಂಬ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಇದರ ಹಿಂದೆ ರಾಜಕಾರಣಿಗಳ ಕೈವಾಡ ಸಹ ಇದೆ ಎಂಬ ಆರೋಪಗಳಿವೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search