• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡ ಎಸ್ಪಿ ಸುಧೀರ್ ವರ್ಗಾವಣೆ, ಸಿಎಂ ಸಾಹೇಬ್ರೇ ದಕ್ಷ ಅಧಿಕಾರಿಗಳು ಬೇಡವೇ ನಿಮಗೆ?

TNN Correspondent Posted On January 21, 2018
0


0
Shares
  • Share On Facebook
  • Tweet It

ಮಂಗಳೂರು: ಸಿ.ಶಿಖಾ, ಅನುಪಮಾ ಶೆಣೈ, ಎಂ.ಕೆ.ಗಣಪತಿ ವರ್ಗಾವಣೆ ವಿಷಯದಲ್ಲಿ ರಾಜ್ಯ ಸರ್ಕಾರದ ಮನೋಭಾವನೆ ಜನರಿಗೆ ಗೊತ್ತಾಗಿದ್ದು ಹಳೇ ವಿಷಯ. ಈಗ ಅಂಥಾದ್ದೇ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರದ ದಕ್ಷ ಅಧಿಕಾರಿಗಳ ಮೇಲೆ ಕೆಂಗಣ್ಣು ಬೀರಿರುವುದು ಬಹಿರಂಗವಾಗಿದೆ.

ಹೌದು, ದಕ್ಷಿಣ ಕನ್ನಡದ ಎಸ್ಪಿಯಾಗಿ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದ್ದ ಸುಧೀರ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ನೂತನ ಎಸ್ಪಿಯಾಗಿ ಬೆಳಗಾವಿ ಎಸ್ಪಿ ಡಾ.ರವಿಕಾಂತೇಗೌಡ ಅವರನ್ನು ಶೀಘ್ರವೇ ನೇಮಿಸಲಾಗಿದೆ.

ಇದೆಲ್ಲ ಏನನ್ನು ತೋರಿಸುತ್ತದೆ. ಯಾವುದೇ ಒಬ್ಬ ಎಸ್ಪಿ ಬೇರೆ ಜಿಲ್ಲೆಗೆ ವರ್ಗಾವಣೆಯಾದರೆ ಅಲ್ಲಿನ ಪರಿಸ್ಥಿತಿ ಅರಿತು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಮಯ ಬೇಕಾಗುತ್ತದೆ. ಮೊದಲೇ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಏನು ಮಾಡಲು ಹೊರಟಿದೆ ಎಂದು ದಕ್ಷಿಣ ಕನ್ನಡದ ಜನ ಪ್ರಶ್ನಿಸುತ್ತಿದ್ದಾರೆ.

ಬಂಟ್ವಾಳದಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣ ಭೇದಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾದ್ಯಂತ ದಕ್ಷ ಅಧಿಕಾರಿ ಎಂಬ ಹೆಸರು ಗಳಿಸಿದ್ದರು. ಅಷ್ಟೇ ಅಲ್ಲದೆ ಹಲವು ಪ್ರಕರಣ, ರೌಡಿಸಂ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಹೀಗಿದ್ದರೂ ಭೂಷಣ ರಾವ್ ಬೊರಸೆ ಅವರಂತೆ ಮತ್ತೊಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ದಕ್ಷ ಅಧಿಕಾರಿಗಳು ತಮಗೆ ಬೇಡ ಎಂಬ ಸಂದೇಶ ರವಾನಿಸಿದ್ದು ಸರಿಯಲ್ಲ ಎಂಬ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಇದರ ಹಿಂದೆ ರಾಜಕಾರಣಿಗಳ ಕೈವಾಡ ಸಹ ಇದೆ ಎಂಬ ಆರೋಪಗಳಿವೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search