• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಕ್ಷಿಣ ಕನ್ನಡ ಎಸ್ಪಿ ಸುಧೀರ್ ವರ್ಗಾವಣೆ, ಸಿಎಂ ಸಾಹೇಬ್ರೇ ದಕ್ಷ ಅಧಿಕಾರಿಗಳು ಬೇಡವೇ ನಿಮಗೆ?

TNN Correspondent Posted On January 21, 2018


  • Share On Facebook
  • Tweet It

ಮಂಗಳೂರು: ಸಿ.ಶಿಖಾ, ಅನುಪಮಾ ಶೆಣೈ, ಎಂ.ಕೆ.ಗಣಪತಿ ವರ್ಗಾವಣೆ ವಿಷಯದಲ್ಲಿ ರಾಜ್ಯ ಸರ್ಕಾರದ ಮನೋಭಾವನೆ ಜನರಿಗೆ ಗೊತ್ತಾಗಿದ್ದು ಹಳೇ ವಿಷಯ. ಈಗ ಅಂಥಾದ್ದೇ ಪ್ರಕರಣದಲ್ಲಿ ಮತ್ತೆ ರಾಜ್ಯ ಸರ್ಕಾರದ ದಕ್ಷ ಅಧಿಕಾರಿಗಳ ಮೇಲೆ ಕೆಂಗಣ್ಣು ಬೀರಿರುವುದು ಬಹಿರಂಗವಾಗಿದೆ.

ಹೌದು, ದಕ್ಷಿಣ ಕನ್ನಡದ ಎಸ್ಪಿಯಾಗಿ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದ್ದ ಸುಧೀರ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ನೂತನ ಎಸ್ಪಿಯಾಗಿ ಬೆಳಗಾವಿ ಎಸ್ಪಿ ಡಾ.ರವಿಕಾಂತೇಗೌಡ ಅವರನ್ನು ಶೀಘ್ರವೇ ನೇಮಿಸಲಾಗಿದೆ.

ಇದೆಲ್ಲ ಏನನ್ನು ತೋರಿಸುತ್ತದೆ. ಯಾವುದೇ ಒಬ್ಬ ಎಸ್ಪಿ ಬೇರೆ ಜಿಲ್ಲೆಗೆ ವರ್ಗಾವಣೆಯಾದರೆ ಅಲ್ಲಿನ ಪರಿಸ್ಥಿತಿ ಅರಿತು ಶಾಂತಿ-ಸುವ್ಯವಸ್ಥೆ ಕಾಪಾಡಲು ಸಮಯ ಬೇಕಾಗುತ್ತದೆ. ಮೊದಲೇ ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಏನು ಮಾಡಲು ಹೊರಟಿದೆ ಎಂದು ದಕ್ಷಿಣ ಕನ್ನಡದ ಜನ ಪ್ರಶ್ನಿಸುತ್ತಿದ್ದಾರೆ.

ಬಂಟ್ವಾಳದಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣ ಭೇದಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾದ್ಯಂತ ದಕ್ಷ ಅಧಿಕಾರಿ ಎಂಬ ಹೆಸರು ಗಳಿಸಿದ್ದರು. ಅಷ್ಟೇ ಅಲ್ಲದೆ ಹಲವು ಪ್ರಕರಣ, ರೌಡಿಸಂ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದರು. ಹೀಗಿದ್ದರೂ ಭೂಷಣ ರಾವ್ ಬೊರಸೆ ಅವರಂತೆ ಮತ್ತೊಬ್ಬ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ದಕ್ಷ ಅಧಿಕಾರಿಗಳು ತಮಗೆ ಬೇಡ ಎಂಬ ಸಂದೇಶ ರವಾನಿಸಿದ್ದು ಸರಿಯಲ್ಲ ಎಂಬ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಇದರ ಹಿಂದೆ ರಾಜಕಾರಣಿಗಳ ಕೈವಾಡ ಸಹ ಇದೆ ಎಂಬ ಆರೋಪಗಳಿವೆ.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search