• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜರ್ಮನಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡಲು ಆಶೀರ್ವಾದ ಮಾಡಿತು ಗೋವು, ನಮ್ಮವರಿಗೆ ಗೋವೆಂದರೆ ನೋವು!

TNN Correspondent Posted On January 22, 2018
0


0
Shares
  • Share On Facebook
  • Tweet It

ಬರ್ಲಿನ್: ಗೋವು ಎಂದರೆ ಭಾರತದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲೂ ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ ಎಂಬುದು ಸಾಬೀತಾಗಿದೆ.

ಜರ್ಮನಿಯ ಬ್ರೆಮೆನ್ ಎಂಬ ಪ್ರದೇಶದಲ್ಲಿ ಹಿಂದೂಗಳು ದೇವಾಲಯ ಕಟ್ಟಲು ಗೋವಿನ ಆಶೀರ್ವಾದ ಪಡೆದಿದ್ದು, ದೇವಾಲಯ ನಿರ್ಮಾಣಕ್ಕೆ ಹಸು ಅನುಮತಿ ನೀಡಿದೆ ಎಂದೇ ಭಾವಿಸಲಾಗಿದೆ.

ಹೌದು, ಜರ್ಮನಿಯ ಈ ಪ್ರದೇಶದಲ್ಲಿ ಸುಮಾರು 300 ಹಿಂದೂ ಕುಟುಂಬಗಳಿದ್ದು, ಹಿಂದೂ ದೇವಾಲಯ ಕಟ್ಟಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಜಾಗವೊಂದನ್ನು ಸಹ ನಿಗದಿಪಡಿಸಿದ್ದು, ಸಂಪ್ರದಾಯದಂತೆ ಗೋವಿನ ಅನುಮತಿ ಪಡೆದಿದ್ದಾರೆ. ಅದಕ್ಕಾಗಿ ರೈತ ಫ್ರ್ಯಾಂಕ್ ಇಮ್ಹಾಫ್ ಎಂಬುವವರ ಮಾಡೆಲ್ ಎಂಬ ಗೋವನ್ನು ದೇವಾಲಯ ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗಕ್ಕೆ ಕರೆದುಕೊಂಡು ಬಂದು ಆಶೀರ್ವಾದ ಪಡೆದಿದ್ದಾರೆ. ನಂಬಿಕೆಯ ಪ್ರಕಾರ, ಗೋವು ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಕೆಲಹೊತ್ತು ನಿಂತರೆ ದೇವಾಲಯ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು, ಹಾಗೂ ನಿಲ್ಲದಿದ್ದರೆ ಬೇಡ ಎಂದು ಅರ್ಥ. ಅದರಂತೆ ಸ್ಥಳದಲ್ಲಿ ಮಾಡೆಲ್ ಕೆಲಹೊತ್ತು ನಿಂತಿದ್ದು, ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದೇ ನಂಬಲಾಗಿದೆ.

ದೇವಾಲಯ ನಿರ್ಮಿಸಲು ಗೋವು ಅನುಮತಿ ನೀಡಿದೆ. ಈ ಪ್ರಾಶಸ್ತ್ಯವಾದ ಸ್ಥಳದಲ್ಲಿ ನಾವು ಹಿಂದೂ ದೇವಾಲಯ ನಿರ್ಮಿಸುತ್ತೇವೆ ಎಂದು ಹಿಂದೂಗಳ ಮುಖಂಡ ಪದ್ಮನಾಥನ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತೀಯರೂ ಸೇರಿ ಸುಮಾರು 10 ಸಾವಿರ ಹಿಂದೂಗಳು ವಾಸಿಸುತ್ತಾರೆ.

ವಿದೇಶದಲ್ಲೂ ಗೋವು ಎಂದರೆ ಪೂಜ್ಯನೀಯ ಭಾವನೆಯಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಮಾತ್ರ ಗೋವು ಎಂದರೆ ತಿನ್ನುವ ಮಾಂಸ ಎಂದೇ ಭಾವಿಸುವವರೂ ಇದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search