• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜರ್ಮನಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡಲು ಆಶೀರ್ವಾದ ಮಾಡಿತು ಗೋವು, ನಮ್ಮವರಿಗೆ ಗೋವೆಂದರೆ ನೋವು!

TNN Correspondent Posted On January 22, 2018
0


0
Shares
  • Share On Facebook
  • Tweet It

ಬರ್ಲಿನ್: ಗೋವು ಎಂದರೆ ಭಾರತದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲೂ ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ ಎಂಬುದು ಸಾಬೀತಾಗಿದೆ.

ಜರ್ಮನಿಯ ಬ್ರೆಮೆನ್ ಎಂಬ ಪ್ರದೇಶದಲ್ಲಿ ಹಿಂದೂಗಳು ದೇವಾಲಯ ಕಟ್ಟಲು ಗೋವಿನ ಆಶೀರ್ವಾದ ಪಡೆದಿದ್ದು, ದೇವಾಲಯ ನಿರ್ಮಾಣಕ್ಕೆ ಹಸು ಅನುಮತಿ ನೀಡಿದೆ ಎಂದೇ ಭಾವಿಸಲಾಗಿದೆ.

ಹೌದು, ಜರ್ಮನಿಯ ಈ ಪ್ರದೇಶದಲ್ಲಿ ಸುಮಾರು 300 ಹಿಂದೂ ಕುಟುಂಬಗಳಿದ್ದು, ಹಿಂದೂ ದೇವಾಲಯ ಕಟ್ಟಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಜಾಗವೊಂದನ್ನು ಸಹ ನಿಗದಿಪಡಿಸಿದ್ದು, ಸಂಪ್ರದಾಯದಂತೆ ಗೋವಿನ ಅನುಮತಿ ಪಡೆದಿದ್ದಾರೆ. ಅದಕ್ಕಾಗಿ ರೈತ ಫ್ರ್ಯಾಂಕ್ ಇಮ್ಹಾಫ್ ಎಂಬುವವರ ಮಾಡೆಲ್ ಎಂಬ ಗೋವನ್ನು ದೇವಾಲಯ ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗಕ್ಕೆ ಕರೆದುಕೊಂಡು ಬಂದು ಆಶೀರ್ವಾದ ಪಡೆದಿದ್ದಾರೆ. ನಂಬಿಕೆಯ ಪ್ರಕಾರ, ಗೋವು ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಕೆಲಹೊತ್ತು ನಿಂತರೆ ದೇವಾಲಯ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು, ಹಾಗೂ ನಿಲ್ಲದಿದ್ದರೆ ಬೇಡ ಎಂದು ಅರ್ಥ. ಅದರಂತೆ ಸ್ಥಳದಲ್ಲಿ ಮಾಡೆಲ್ ಕೆಲಹೊತ್ತು ನಿಂತಿದ್ದು, ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದೇ ನಂಬಲಾಗಿದೆ.

ದೇವಾಲಯ ನಿರ್ಮಿಸಲು ಗೋವು ಅನುಮತಿ ನೀಡಿದೆ. ಈ ಪ್ರಾಶಸ್ತ್ಯವಾದ ಸ್ಥಳದಲ್ಲಿ ನಾವು ಹಿಂದೂ ದೇವಾಲಯ ನಿರ್ಮಿಸುತ್ತೇವೆ ಎಂದು ಹಿಂದೂಗಳ ಮುಖಂಡ ಪದ್ಮನಾಥನ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತೀಯರೂ ಸೇರಿ ಸುಮಾರು 10 ಸಾವಿರ ಹಿಂದೂಗಳು ವಾಸಿಸುತ್ತಾರೆ.

ವಿದೇಶದಲ್ಲೂ ಗೋವು ಎಂದರೆ ಪೂಜ್ಯನೀಯ ಭಾವನೆಯಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಮಾತ್ರ ಗೋವು ಎಂದರೆ ತಿನ್ನುವ ಮಾಂಸ ಎಂದೇ ಭಾವಿಸುವವರೂ ಇದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search