• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜರ್ಮನಿಯಲ್ಲಿ ಹಿಂದೂ ದೇವಾಲಯ ನಿರ್ಮಾಣ ಮಾಡಲು ಆಶೀರ್ವಾದ ಮಾಡಿತು ಗೋವು, ನಮ್ಮವರಿಗೆ ಗೋವೆಂದರೆ ನೋವು!

TNN Correspondent Posted On January 22, 2018
0


0
Shares
  • Share On Facebook
  • Tweet It

ಬರ್ಲಿನ್: ಗೋವು ಎಂದರೆ ಭಾರತದಲ್ಲಿ ಮಾತ್ರವಲ್ಲ, ಅನ್ಯ ದೇಶಗಳಲ್ಲೂ ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ ಎಂಬುದು ಸಾಬೀತಾಗಿದೆ.

ಜರ್ಮನಿಯ ಬ್ರೆಮೆನ್ ಎಂಬ ಪ್ರದೇಶದಲ್ಲಿ ಹಿಂದೂಗಳು ದೇವಾಲಯ ಕಟ್ಟಲು ಗೋವಿನ ಆಶೀರ್ವಾದ ಪಡೆದಿದ್ದು, ದೇವಾಲಯ ನಿರ್ಮಾಣಕ್ಕೆ ಹಸು ಅನುಮತಿ ನೀಡಿದೆ ಎಂದೇ ಭಾವಿಸಲಾಗಿದೆ.

ಹೌದು, ಜರ್ಮನಿಯ ಈ ಪ್ರದೇಶದಲ್ಲಿ ಸುಮಾರು 300 ಹಿಂದೂ ಕುಟುಂಬಗಳಿದ್ದು, ಹಿಂದೂ ದೇವಾಲಯ ಕಟ್ಟಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ಜಾಗವೊಂದನ್ನು ಸಹ ನಿಗದಿಪಡಿಸಿದ್ದು, ಸಂಪ್ರದಾಯದಂತೆ ಗೋವಿನ ಅನುಮತಿ ಪಡೆದಿದ್ದಾರೆ. ಅದಕ್ಕಾಗಿ ರೈತ ಫ್ರ್ಯಾಂಕ್ ಇಮ್ಹಾಫ್ ಎಂಬುವವರ ಮಾಡೆಲ್ ಎಂಬ ಗೋವನ್ನು ದೇವಾಲಯ ನಿರ್ಮಾಣ ಮಾಡಲು ನಿಗದಿಪಡಿಸಿರುವ ಜಾಗಕ್ಕೆ ಕರೆದುಕೊಂಡು ಬಂದು ಆಶೀರ್ವಾದ ಪಡೆದಿದ್ದಾರೆ. ನಂಬಿಕೆಯ ಪ್ರಕಾರ, ಗೋವು ದೇವಾಲಯ ನಿರ್ಮಾಣ ಮಾಡುವ ಸ್ಥಳದಲ್ಲಿ ಕೆಲಹೊತ್ತು ನಿಂತರೆ ದೇವಾಲಯ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ ಎಂದು, ಹಾಗೂ ನಿಲ್ಲದಿದ್ದರೆ ಬೇಡ ಎಂದು ಅರ್ಥ. ಅದರಂತೆ ಸ್ಥಳದಲ್ಲಿ ಮಾಡೆಲ್ ಕೆಲಹೊತ್ತು ನಿಂತಿದ್ದು, ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದೇ ನಂಬಲಾಗಿದೆ.

ದೇವಾಲಯ ನಿರ್ಮಿಸಲು ಗೋವು ಅನುಮತಿ ನೀಡಿದೆ. ಈ ಪ್ರಾಶಸ್ತ್ಯವಾದ ಸ್ಥಳದಲ್ಲಿ ನಾವು ಹಿಂದೂ ದೇವಾಲಯ ನಿರ್ಮಿಸುತ್ತೇವೆ ಎಂದು ಹಿಂದೂಗಳ ಮುಖಂಡ ಪದ್ಮನಾಥನ್ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತೀಯರೂ ಸೇರಿ ಸುಮಾರು 10 ಸಾವಿರ ಹಿಂದೂಗಳು ವಾಸಿಸುತ್ತಾರೆ.

ವಿದೇಶದಲ್ಲೂ ಗೋವು ಎಂದರೆ ಪೂಜ್ಯನೀಯ ಭಾವನೆಯಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಮಾತ್ರ ಗೋವು ಎಂದರೆ ತಿನ್ನುವ ಮಾಂಸ ಎಂದೇ ಭಾವಿಸುವವರೂ ಇದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search