• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯನವರಿಗೆ ರಕ್ತದಲ್ಲಿ ಪತ್ರ!

TNN Correspondent Posted On January 22, 2018
0


0
Shares
  • Share On Facebook
  • Tweet It

ಮಂಗಳೂರು: ದೇಶಾದ್ಯಂತ ಗೋಹತ್ಯೆ ನಿಷೇಧ, ಗೋವುಗಳ ರಕ್ಷಣೆ ಕುರಿತು ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ, ಭಾರತೀಯ ಗೋ ಪರಿವಾರ (ಬಿಜಿಪಿ) ಸಂಘಟನೆಯ ಸ್ವಯಂ ಸೇವಕರು ರಕ್ತದಲ್ಲಿ ಪತ್ರ ಬರೆಯುವ “ರಕ್ತಾಕ್ಷರ” ಅಭಿಯಾನ ಕೈಗೊಂಡಿದ್ದಾರೆ.

ಈ ಕುರಿತು ಸ್ವಯಂ ಸೇವಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಲು ಅಭಿಯಾನ ಕೈಗೊಂಡಿದ್ದಾರೆ.

ದೇಶಾದ್ಯಂತ ಗೋಹತ್ಯೆ ಮಾಡುವುದನ್ನು ನಿಷೇಧ ಮಾಡುವಂತೆ ಗೋ ಪರಿವಾರ ಸಂಘಟನೆಯ 500 ಗೋ ರಕ್ಷಕರು ರಕ್ತದಲ್ಲಿ ಪತ್ರ ಬರೆಯುವ ಮೂಲಕ ರಕ್ತಾಕ್ಷರ ಅಭಿಯಾನ ಕೈಗೊಂಡಿದ್ದಾರೆ ಎಂದು ಬಿಜಿಪಿ ಸದಸ್ಯ ರವೀಶ್ ಭಟ್ ಮಾಹಿತಿ ನೀಡಿದ್ದಾರೆ.

ಒತ್ತಾಯ ಪೂರ್ವಕವಾಗಿ ಯಾರಿಂದಲೂ ಪತ್ರ ಬರೆಸಿಲ್ಲ. ಗೋರಕ್ಷಕರು ಸ್ವಯಂ ಪ್ರೇರಿತರಾಗಿ ಅಭಿಯಾನ ಕೈಗೊಂಡಿದ್ದು, ಇದರಲ್ಲಿ ಯಾರ ಒತ್ತಾಯವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಮಾರು 500 ಗೋರಕ್ಷಕರ ದೇಹದ 3 ಎಂಎಲ್ ರಕ್ತ ಪಡೆದು, ಇಂಕಿನ್ ಪೆನ್ ತಯಾರಿಸಲಾಗಿದೆ. ಈ ಪೆನ್ ಗಳಿಂದಲೇ ಪತ್ರ ಬರೆಸಿದ್ದು, ತಜ್ಞರ ಸಲಹೆ ಸಹ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಅಭಯಾಕ್ಷರ ಎಂಬ ಮತ್ತೊಂದು ಸಹಿ ಅಭಿಯಾನ ಪ್ರಾರಂಭಿಸಲಾಗಿದ್ದು, ರಾಜ್ಯದಲ್ಲಿ 70 ಲಕ್ಷ ಜನ ಬೆಂಬಲ ಸೂಚಿಸಿದ್ದಾರೆ. ಇವರೆಲ್ಲರ ಸಹಿ ಸಂಗ್ರಹಿಸಿ ಕನಿಷ್ಠ ಒಂದು ಕೋಟಿ ಪತ್ರಗಳನ್ನು ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ರವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

2017ರ ಮೇ 25ರಂದು ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧದ ಕುರಿತು ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search