• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯನವರಿಗೆ ರಕ್ತದಲ್ಲಿ ಪತ್ರ!

TNN Correspondent Posted On January 22, 2018
0


0
Shares
  • Share On Facebook
  • Tweet It

ಮಂಗಳೂರು: ದೇಶಾದ್ಯಂತ ಗೋಹತ್ಯೆ ನಿಷೇಧ, ಗೋವುಗಳ ರಕ್ಷಣೆ ಕುರಿತು ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ, ಭಾರತೀಯ ಗೋ ಪರಿವಾರ (ಬಿಜಿಪಿ) ಸಂಘಟನೆಯ ಸ್ವಯಂ ಸೇವಕರು ರಕ್ತದಲ್ಲಿ ಪತ್ರ ಬರೆಯುವ “ರಕ್ತಾಕ್ಷರ” ಅಭಿಯಾನ ಕೈಗೊಂಡಿದ್ದಾರೆ.

ಈ ಕುರಿತು ಸ್ವಯಂ ಸೇವಕರು ರಕ್ತದಲ್ಲಿ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನಿಸಲು ಅಭಿಯಾನ ಕೈಗೊಂಡಿದ್ದಾರೆ.

ದೇಶಾದ್ಯಂತ ಗೋಹತ್ಯೆ ಮಾಡುವುದನ್ನು ನಿಷೇಧ ಮಾಡುವಂತೆ ಗೋ ಪರಿವಾರ ಸಂಘಟನೆಯ 500 ಗೋ ರಕ್ಷಕರು ರಕ್ತದಲ್ಲಿ ಪತ್ರ ಬರೆಯುವ ಮೂಲಕ ರಕ್ತಾಕ್ಷರ ಅಭಿಯಾನ ಕೈಗೊಂಡಿದ್ದಾರೆ ಎಂದು ಬಿಜಿಪಿ ಸದಸ್ಯ ರವೀಶ್ ಭಟ್ ಮಾಹಿತಿ ನೀಡಿದ್ದಾರೆ.

ಒತ್ತಾಯ ಪೂರ್ವಕವಾಗಿ ಯಾರಿಂದಲೂ ಪತ್ರ ಬರೆಸಿಲ್ಲ. ಗೋರಕ್ಷಕರು ಸ್ವಯಂ ಪ್ರೇರಿತರಾಗಿ ಅಭಿಯಾನ ಕೈಗೊಂಡಿದ್ದು, ಇದರಲ್ಲಿ ಯಾರ ಒತ್ತಾಯವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಮಾರು 500 ಗೋರಕ್ಷಕರ ದೇಹದ 3 ಎಂಎಲ್ ರಕ್ತ ಪಡೆದು, ಇಂಕಿನ್ ಪೆನ್ ತಯಾರಿಸಲಾಗಿದೆ. ಈ ಪೆನ್ ಗಳಿಂದಲೇ ಪತ್ರ ಬರೆಸಿದ್ದು, ತಜ್ಞರ ಸಲಹೆ ಸಹ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಅಭಯಾಕ್ಷರ ಎಂಬ ಮತ್ತೊಂದು ಸಹಿ ಅಭಿಯಾನ ಪ್ರಾರಂಭಿಸಲಾಗಿದ್ದು, ರಾಜ್ಯದಲ್ಲಿ 70 ಲಕ್ಷ ಜನ ಬೆಂಬಲ ಸೂಚಿಸಿದ್ದಾರೆ. ಇವರೆಲ್ಲರ ಸಹಿ ಸಂಗ್ರಹಿಸಿ ಕನಿಷ್ಠ ಒಂದು ಕೋಟಿ ಪತ್ರಗಳನ್ನು ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿ ಅವರಿಗೆ ರವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

2017ರ ಮೇ 25ರಂದು ಕೇಂದ್ರ ಸರ್ಕಾರ ಗೋಹತ್ಯೆ ನಿಷೇಧದ ಕುರಿತು ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 5
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!

  • Privacy Policy
  • Contact
© Tulunadu Infomedia.

Press enter/return to begin your search