• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಡಿ ದಾಟುವ ಪಾಕಿಸ್ತಾನಕ್ಕೆ ತಕ್ಕ ಪಾಠ, ಪಾಕ್ ಸೇನಾ ನೆಲೆ ಉಡೀಸ್!

TNN Correspondent Posted On January 23, 2018


  • Share On Facebook
  • Tweet It

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಪಡೆ ತಕ್ಕ ಪಾಠ ಕಲಿಸಿದ್ದು, ಪಾಕಿಸ್ತಾನ ಭಾರತದ ಮೇಲೆ ಗುಂಡಿನ ದಾಳಿ ಮಾಡುವ ಸೇನಾ ನೆಲೆಗಳನ್ನು ನಾಶಪಡಿಸಿದೆ.

ಅಂತಾರಾಷ್ಟ್ರೀಯ ಗಡಿ ಭಾಗದ ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಗಡಿ ನಿಯಮ ಉಲ್ಲಂಘಿಸಿ ದಾಳಿ ಮಾಡುತ್ತಿದ್ದ ಪಾಕಿಸ್ತಾನದ ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಬಿಎಸ್ಎಫ್ ವಕ್ತಾರರು ಮಾಹಿತಿ ನೀಡಿದ್ದಾರೆ. ದಾಳಿ ವೇಳೆ ಪಾಕಿಸ್ತಾನದ ಸೇನಾ ನೆಲೆ, ಶಸ್ತ್ರಾಸ್ತ್ರ ಹೊಂದಿರುವ ನೆಲೆ ಹಾಗೂ ಇಂಧನ ಹೊಂದಿರುವ ನೆಲೆಗಳನ್ನು ನಾಶಪಡಿಸಿಲಾಗಿದ್ದು, ಸಮರ್ಥ ದಾಳಿ ನಿಭಾಯಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸೇನಾಪಡೆ ಸುಮಾರು ಒಂಬತ್ತು ಸಾವಿರ ಸುತ್ತು ಮೋರ್ಟಾರ್ ಶೆಲ್ ಬಳಸಿ ಕಳೆದ ನಾಲ್ಕು ದಿನಗಳಿಂದ ದಾಳಿ ನಡೆಸಲಾಗಿದೆ. ಪಾಕಿಸ್ತಾನಿ ಸೇನೆಯ ನೆಲೆಗಳನ್ನು ಎಡೆಬಿಡದೆ ಹುಡುಕಿ ಧ್ವಂಸಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಜನವರಿ 19ರಂದು ಪಾಕಿಸ್ತಾನ ಮೊದಲ ಬಾರಿಗೆ ಗಡಿ ನಿಯಮ ಉಲ್ಲಂಘಿಸಿ ದಾಳಿ ಆರಂಭಿಸಿತು. ಇದರಿಂದಾಗಿ ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ವ್ಯಾಪ್ತಿಯ 190 ಕಿಲೋ ಮೀಟರ್ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು. ಹಾಗಾಗಿ ಪ್ರತಿ ದಾಳಿ ಅನಿವಾರ್ಯವಾಯಿತು ಎಂದು ಸೇನೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಗಡಿಯಲ್ಲಿ ನಿಯಮ ಉಲ್ಲಂಘಿಸಿ ದಾಳಿ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತದ ಈ ಪ್ರತ್ಯುತ್ತರ ತಕ್ಕ ಪಾಠವಾಗಿದ್ದು, ಪಾಕಿಸ್ತಾನ ಇನ್ನಾದರೂ ಸುಮ್ಮನಿದ್ದರೆ ಅದೇ ರಾಷ್ಟ್ರಕ್ಕೆ ಒಳಿತು ಎಂಬ ಸಂದೇಶ ರವಾನಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search