• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿ ದಾಟುವ ಪಾಕಿಸ್ತಾನಕ್ಕೆ ತಕ್ಕ ಪಾಠ, ಪಾಕ್ ಸೇನಾ ನೆಲೆ ಉಡೀಸ್!

TNN Correspondent Posted On January 23, 2018
0


0
Shares
  • Share On Facebook
  • Tweet It

ಶ್ರೀನಗರ: ಇತ್ತೀಚೆಗೆ ಜಮ್ಮು-ಕಾಶ್ಮೀರದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಪಡೆ ತಕ್ಕ ಪಾಠ ಕಲಿಸಿದ್ದು, ಪಾಕಿಸ್ತಾನ ಭಾರತದ ಮೇಲೆ ಗುಂಡಿನ ದಾಳಿ ಮಾಡುವ ಸೇನಾ ನೆಲೆಗಳನ್ನು ನಾಶಪಡಿಸಿದೆ.

ಅಂತಾರಾಷ್ಟ್ರೀಯ ಗಡಿ ಭಾಗದ ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಗಡಿ ನಿಯಮ ಉಲ್ಲಂಘಿಸಿ ದಾಳಿ ಮಾಡುತ್ತಿದ್ದ ಪಾಕಿಸ್ತಾನದ ಹಲವು ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಬಿಎಸ್ಎಫ್ ವಕ್ತಾರರು ಮಾಹಿತಿ ನೀಡಿದ್ದಾರೆ. ದಾಳಿ ವೇಳೆ ಪಾಕಿಸ್ತಾನದ ಸೇನಾ ನೆಲೆ, ಶಸ್ತ್ರಾಸ್ತ್ರ ಹೊಂದಿರುವ ನೆಲೆ ಹಾಗೂ ಇಂಧನ ಹೊಂದಿರುವ ನೆಲೆಗಳನ್ನು ನಾಶಪಡಿಸಿಲಾಗಿದ್ದು, ಸಮರ್ಥ ದಾಳಿ ನಿಭಾಯಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತೀಯ ಸೇನಾಪಡೆ ಸುಮಾರು ಒಂಬತ್ತು ಸಾವಿರ ಸುತ್ತು ಮೋರ್ಟಾರ್ ಶೆಲ್ ಬಳಸಿ ಕಳೆದ ನಾಲ್ಕು ದಿನಗಳಿಂದ ದಾಳಿ ನಡೆಸಲಾಗಿದೆ. ಪಾಕಿಸ್ತಾನಿ ಸೇನೆಯ ನೆಲೆಗಳನ್ನು ಎಡೆಬಿಡದೆ ಹುಡುಕಿ ಧ್ವಂಸಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಜನವರಿ 19ರಂದು ಪಾಕಿಸ್ತಾನ ಮೊದಲ ಬಾರಿಗೆ ಗಡಿ ನಿಯಮ ಉಲ್ಲಂಘಿಸಿ ದಾಳಿ ಆರಂಭಿಸಿತು. ಇದರಿಂದಾಗಿ ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ವ್ಯಾಪ್ತಿಯ 190 ಕಿಲೋ ಮೀಟರ್ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು. ಹಾಗಾಗಿ ಪ್ರತಿ ದಾಳಿ ಅನಿವಾರ್ಯವಾಯಿತು ಎಂದು ಸೇನೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಗಡಿಯಲ್ಲಿ ನಿಯಮ ಉಲ್ಲಂಘಿಸಿ ದಾಳಿ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತದ ಈ ಪ್ರತ್ಯುತ್ತರ ತಕ್ಕ ಪಾಠವಾಗಿದ್ದು, ಪಾಕಿಸ್ತಾನ ಇನ್ನಾದರೂ ಸುಮ್ಮನಿದ್ದರೆ ಅದೇ ರಾಷ್ಟ್ರಕ್ಕೆ ಒಳಿತು ಎಂಬ ಸಂದೇಶ ರವಾನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search