• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಪತಿ ಒಪ್ಪಿಗೆಗೆ ಮಣಿದ ಆಪ್ ಶಾಸಕರು, ದೆಹಲಿ ಹೈಕೋರ್ಟಿಗೆ ಸಲ್ಲಿಸಿದ ಅರ್ಜಿ ಹಿಂಪಡೆತ

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದಲ್ಲಿ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಲು ಚುನಾವಣೆ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ ಬೆನ್ನಲ್ಲೇ ಅನರ್ಹಗೊಂಡ ಶಾಸಕರು ಮೆತ್ತಗಾಗಿದ್ದಾರೆ.

ರಾಷ್ಟ್ರಪತಿ ಅವರು ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ಶಿಫಾರಸು ಪ್ರಶ್ನಿಸಿ ದೆಹಲಿಗೆ ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಆಮ್ ಆದ್ಮಿಪಕ್ಷದ ಶಾಸಕರು ಸಂಸದೀಯ ಕಾರ್ಯದರ್ಶಿ ಎಂಬ ಲಾಭದಾಯಕ ಹುದ್ದೆಯಲ್ಲಿದ್ದು, ಹಲವು ಸೌಲಭ್ಯ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಪ್ ನ 20 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಿತ್ತು.

ಇದರಿಂದ ತೀವ್ರ ಮುಜುಗರಕ್ಕೊಳಗಾಗಿದ್ದ ಆಪ್ ನ 6 ಶಾಸಕರು ಕಳೆದ ಶುಕ್ರವಾರವೇ ಚುನಾವಣೆ ಆಯೋಗದ ತೀರ್ಮಾನಕ್ಕೆ ಕೂಡಲೇ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ದೆಹಲಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣೆ ಆಯೋಗ ಸೋಮವಾರ ವಿಚಾರಣೆ ಆರಂಭಿಸುವುದಾಗಿ ತಿಳಿಸಿತ್ತು.

ಆದರೆ ಭಾನುವಾರವೇ ರಾಷ್ಟ್ರಪತಿಯವರು ಆಪ್ ಶಾಸಕರ ಅನರ್ಹಗೊಳಿಸುವ ಶಿಫಾರಸಿಗೆ ಅಂಕಿತ ಹಾಕಿದ್ದಾರೆ. ಹಾಗಾಗಿ ನಾವು ಸಲ್ಲಿಸಿರುವ ಅರ್ಜಿ ರಾಷ್ಟ್ರಪತಿಗಳ ಆದೇಶ ವಿರುದ್ಧವಾಗಿ ಬದಲಾಗುವುದರಿಂದ ಮನವಿ ಹಿಂಪಡೆಯಲಾಗಿದೆ ಎಂದು ಅನರ್ಹಗೊಂಡಿರುವ ಶಾಸಕರೊಬ್ಬರು ಮಾಹಿತಿ ನೀಡಿದ್ದಾರೆ.

ಆದಾಗ್ಯೂ ಆಮ್ ಆದ್ಮಿ ಪಕ್ಷವು ಚುನಾವಣೆ ಆಯೋಗದ ಪ್ರಕ್ರಿಯೆ, ವಿಚಾರಣೆ ವಿಧಾನದ ಉಸ್ತುವಾರಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಮಾರ್ಚ್ 20ರಂದು ವಿಚಾರಣೆ ನಡೆಸುವುದಾಗಿ ದೆಹಲಿ ಹೈಕೋರ್ಟ್ ತಿಳಿಸಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search