• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು ಎಂದವರು ಈ ಸುದ್ದಿ ಓದಿ!

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಗೊಳಿಸಿದ ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಪ್ರತಿಪಕ್ಷಗಳು, ಬುದ್ಧಿಜೀವಿಗಳು ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು, ಇನ್ನು ಭಾರತದ ವಿತ್ತೀಯ ಸ್ಥಿತಿ ಅಧೋಗತಿಗೆ ಇಳಿಯಿತು ಎಂದೇ ಬೊಬ್ಬೆ ಹಾಕಿದ್ದರು.

ಆದರೆ ಅಂತರಾಷ್ಟ್ರೀಯ ಮನಿ ಫಂಡ್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ರಾಷ್ಟ್ರೀಯ ಒಟ್ಟು ಉತ್ಪನ್ನ (ಜಿಡಿಪಿ) ಪ್ರಮಾಣ ಪ್ರಸಕ್ತ ವರ್ಷದಲ್ಲಿ 7.4ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಜಿಡಿಪಿ ಬೆಳವಣಿಗೆ ದರದಲ್ಲಿ ಭಾರತ ಚೀನಾವನ್ನೂ ಮೀರಿಸಲಿದ್ದು, ಚೀನಾದ ಶೇ.6.8ರಷ್ಟಿರುವ ಜಿಡಿಪಿಯನ್ನು ಹಿಂದಿಕ್ಕಲಿದೆ ಎಂದು ತಿಳಿಸಿದೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಲ್ಡ್ ಎಕನಾಮಿಕ್ ಫೋರಂಗೆ ಭೇಟಿ ನೀಡಲು ಸ್ವಿಡ್ಜರ್ ಲೆಂಡಿಗೆ ತೆರಳಿದ ಬೆನ್ನಲ್ಲೇ, ವರ್ಲ್ಡ್ ಎಕನಾಮಿಕ್ ಔಟ್ ಲುಕ್ ಸಂಸ್ಥೆಯೂ ಭಾರತದ ಜಿಡಿಪಿ ದರದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, 2019ರಲ್ಲಿ ಭಾರತದ ಶೇ.7.8ಕ್ಕೆ ತಲುಪಲಿದೆ ಎಂದು ತಿಳಿಸಿದೆ.

ಪ್ರಸ್ತುತ ಚೀನಾದ ಜಿಡಿಪಿ ದರದ ಬೆಳವಣಿಗೆ ನಿಧಾನಗತಿಯಲ್ಲಿ ಸಾಗಿದ್ದು, ಇದೇ ಅವಧಿಯಲ್ಲಿ ಚೀನಾ ಜಿಡಿಪಿ ಶೇ.6.6ಕ್ಕೆ ಕುಸಿಯಲಿದೆ. ಅಲ್ಲದೆ ಭಾರತದ ಜಿಡಿಪಿ ದರ ಚೀನಾಕ್ಕಿಂತಲೂ ಜಾಸ್ತಿಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2016ರಲ್ಲಿ ಭಾರತದ ಜಿಡಿಪಿ ದರ ಶೇ.7.1ಕ್ಕೆ ತಲುಪಿದಾಗಲೂ ಸುಮ್ಮನಿದ್ದ, ಮೋದಿಯವರನ್ನು ಹೊಗಳದ ದೇಶದ ಕೆಲವರು ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ಜಿಡಿಪಿ ತುಸು ಕುಸಿದಿದ್ದನ್ನೇ ದೇಶದ ಆರ್ಥಿಕ ಬೆಳವಣಿಗೆ ತಳ ಮುಟ್ಟುತ್ತದೆ ಎಂದಿದ್ದರು. ಆದರೆ ದೇಶದಲ್ಲಿ ಜಾರಿಯಾದ ಆರ್ಥಿಕ ಸುಧಾರಣೆಗಳಿಂದಲೇ ಇಂದು ಭಾರತದ ಜಿಡಿಪಿ ಜಾಸ್ತಿಯಾಗುತ್ತಿದ್ದರೂ ಇವರು ಒಂದೇ ಒಂದು ಮಾತು ಆಡುತ್ತಿಲ್ಲ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search