• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು ಎಂದವರು ಈ ಸುದ್ದಿ ಓದಿ!

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಗೊಳಿಸಿದ ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಪ್ರತಿಪಕ್ಷಗಳು, ಬುದ್ಧಿಜೀವಿಗಳು ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು, ಇನ್ನು ಭಾರತದ ವಿತ್ತೀಯ ಸ್ಥಿತಿ ಅಧೋಗತಿಗೆ ಇಳಿಯಿತು ಎಂದೇ ಬೊಬ್ಬೆ ಹಾಕಿದ್ದರು.

ಆದರೆ ಅಂತರಾಷ್ಟ್ರೀಯ ಮನಿ ಫಂಡ್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ರಾಷ್ಟ್ರೀಯ ಒಟ್ಟು ಉತ್ಪನ್ನ (ಜಿಡಿಪಿ) ಪ್ರಮಾಣ ಪ್ರಸಕ್ತ ವರ್ಷದಲ್ಲಿ 7.4ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಜಿಡಿಪಿ ಬೆಳವಣಿಗೆ ದರದಲ್ಲಿ ಭಾರತ ಚೀನಾವನ್ನೂ ಮೀರಿಸಲಿದ್ದು, ಚೀನಾದ ಶೇ.6.8ರಷ್ಟಿರುವ ಜಿಡಿಪಿಯನ್ನು ಹಿಂದಿಕ್ಕಲಿದೆ ಎಂದು ತಿಳಿಸಿದೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಲ್ಡ್ ಎಕನಾಮಿಕ್ ಫೋರಂಗೆ ಭೇಟಿ ನೀಡಲು ಸ್ವಿಡ್ಜರ್ ಲೆಂಡಿಗೆ ತೆರಳಿದ ಬೆನ್ನಲ್ಲೇ, ವರ್ಲ್ಡ್ ಎಕನಾಮಿಕ್ ಔಟ್ ಲುಕ್ ಸಂಸ್ಥೆಯೂ ಭಾರತದ ಜಿಡಿಪಿ ದರದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, 2019ರಲ್ಲಿ ಭಾರತದ ಶೇ.7.8ಕ್ಕೆ ತಲುಪಲಿದೆ ಎಂದು ತಿಳಿಸಿದೆ.

ಪ್ರಸ್ತುತ ಚೀನಾದ ಜಿಡಿಪಿ ದರದ ಬೆಳವಣಿಗೆ ನಿಧಾನಗತಿಯಲ್ಲಿ ಸಾಗಿದ್ದು, ಇದೇ ಅವಧಿಯಲ್ಲಿ ಚೀನಾ ಜಿಡಿಪಿ ಶೇ.6.6ಕ್ಕೆ ಕುಸಿಯಲಿದೆ. ಅಲ್ಲದೆ ಭಾರತದ ಜಿಡಿಪಿ ದರ ಚೀನಾಕ್ಕಿಂತಲೂ ಜಾಸ್ತಿಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2016ರಲ್ಲಿ ಭಾರತದ ಜಿಡಿಪಿ ದರ ಶೇ.7.1ಕ್ಕೆ ತಲುಪಿದಾಗಲೂ ಸುಮ್ಮನಿದ್ದ, ಮೋದಿಯವರನ್ನು ಹೊಗಳದ ದೇಶದ ಕೆಲವರು ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ಜಿಡಿಪಿ ತುಸು ಕುಸಿದಿದ್ದನ್ನೇ ದೇಶದ ಆರ್ಥಿಕ ಬೆಳವಣಿಗೆ ತಳ ಮುಟ್ಟುತ್ತದೆ ಎಂದಿದ್ದರು. ಆದರೆ ದೇಶದಲ್ಲಿ ಜಾರಿಯಾದ ಆರ್ಥಿಕ ಸುಧಾರಣೆಗಳಿಂದಲೇ ಇಂದು ಭಾರತದ ಜಿಡಿಪಿ ಜಾಸ್ತಿಯಾಗುತ್ತಿದ್ದರೂ ಇವರು ಒಂದೇ ಒಂದು ಮಾತು ಆಡುತ್ತಿಲ್ಲ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search