• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು ಎಂದವರು ಈ ಸುದ್ದಿ ಓದಿ!

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಗೊಳಿಸಿದ ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಪ್ರತಿಪಕ್ಷಗಳು, ಬುದ್ಧಿಜೀವಿಗಳು ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು, ಇನ್ನು ಭಾರತದ ವಿತ್ತೀಯ ಸ್ಥಿತಿ ಅಧೋಗತಿಗೆ ಇಳಿಯಿತು ಎಂದೇ ಬೊಬ್ಬೆ ಹಾಕಿದ್ದರು.

ಆದರೆ ಅಂತರಾಷ್ಟ್ರೀಯ ಮನಿ ಫಂಡ್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ರಾಷ್ಟ್ರೀಯ ಒಟ್ಟು ಉತ್ಪನ್ನ (ಜಿಡಿಪಿ) ಪ್ರಮಾಣ ಪ್ರಸಕ್ತ ವರ್ಷದಲ್ಲಿ 7.4ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಜಿಡಿಪಿ ಬೆಳವಣಿಗೆ ದರದಲ್ಲಿ ಭಾರತ ಚೀನಾವನ್ನೂ ಮೀರಿಸಲಿದ್ದು, ಚೀನಾದ ಶೇ.6.8ರಷ್ಟಿರುವ ಜಿಡಿಪಿಯನ್ನು ಹಿಂದಿಕ್ಕಲಿದೆ ಎಂದು ತಿಳಿಸಿದೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಲ್ಡ್ ಎಕನಾಮಿಕ್ ಫೋರಂಗೆ ಭೇಟಿ ನೀಡಲು ಸ್ವಿಡ್ಜರ್ ಲೆಂಡಿಗೆ ತೆರಳಿದ ಬೆನ್ನಲ್ಲೇ, ವರ್ಲ್ಡ್ ಎಕನಾಮಿಕ್ ಔಟ್ ಲುಕ್ ಸಂಸ್ಥೆಯೂ ಭಾರತದ ಜಿಡಿಪಿ ದರದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, 2019ರಲ್ಲಿ ಭಾರತದ ಶೇ.7.8ಕ್ಕೆ ತಲುಪಲಿದೆ ಎಂದು ತಿಳಿಸಿದೆ.

ಪ್ರಸ್ತುತ ಚೀನಾದ ಜಿಡಿಪಿ ದರದ ಬೆಳವಣಿಗೆ ನಿಧಾನಗತಿಯಲ್ಲಿ ಸಾಗಿದ್ದು, ಇದೇ ಅವಧಿಯಲ್ಲಿ ಚೀನಾ ಜಿಡಿಪಿ ಶೇ.6.6ಕ್ಕೆ ಕುಸಿಯಲಿದೆ. ಅಲ್ಲದೆ ಭಾರತದ ಜಿಡಿಪಿ ದರ ಚೀನಾಕ್ಕಿಂತಲೂ ಜಾಸ್ತಿಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2016ರಲ್ಲಿ ಭಾರತದ ಜಿಡಿಪಿ ದರ ಶೇ.7.1ಕ್ಕೆ ತಲುಪಿದಾಗಲೂ ಸುಮ್ಮನಿದ್ದ, ಮೋದಿಯವರನ್ನು ಹೊಗಳದ ದೇಶದ ಕೆಲವರು ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ಜಿಡಿಪಿ ತುಸು ಕುಸಿದಿದ್ದನ್ನೇ ದೇಶದ ಆರ್ಥಿಕ ಬೆಳವಣಿಗೆ ತಳ ಮುಟ್ಟುತ್ತದೆ ಎಂದಿದ್ದರು. ಆದರೆ ದೇಶದಲ್ಲಿ ಜಾರಿಯಾದ ಆರ್ಥಿಕ ಸುಧಾರಣೆಗಳಿಂದಲೇ ಇಂದು ಭಾರತದ ಜಿಡಿಪಿ ಜಾಸ್ತಿಯಾಗುತ್ತಿದ್ದರೂ ಇವರು ಒಂದೇ ಒಂದು ಮಾತು ಆಡುತ್ತಿಲ್ಲ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search