• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು ಎಂದವರು ಈ ಸುದ್ದಿ ಓದಿ!

TNN Correspondent Posted On January 23, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಗೊಳಿಸಿದ ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಪ್ರತಿಪಕ್ಷಗಳು, ಬುದ್ಧಿಜೀವಿಗಳು ಭಾರತದ ಜಿಡಿಪಿ ಕುಸಿಯಿತು, ಕುಸಿಯಿತು, ಇನ್ನು ಭಾರತದ ವಿತ್ತೀಯ ಸ್ಥಿತಿ ಅಧೋಗತಿಗೆ ಇಳಿಯಿತು ಎಂದೇ ಬೊಬ್ಬೆ ಹಾಕಿದ್ದರು.

ಆದರೆ ಅಂತರಾಷ್ಟ್ರೀಯ ಮನಿ ಫಂಡ್ ಸಂಸ್ಥೆ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದ ರಾಷ್ಟ್ರೀಯ ಒಟ್ಟು ಉತ್ಪನ್ನ (ಜಿಡಿಪಿ) ಪ್ರಮಾಣ ಪ್ರಸಕ್ತ ವರ್ಷದಲ್ಲಿ 7.4ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಜಿಡಿಪಿ ಬೆಳವಣಿಗೆ ದರದಲ್ಲಿ ಭಾರತ ಚೀನಾವನ್ನೂ ಮೀರಿಸಲಿದ್ದು, ಚೀನಾದ ಶೇ.6.8ರಷ್ಟಿರುವ ಜಿಡಿಪಿಯನ್ನು ಹಿಂದಿಕ್ಕಲಿದೆ ಎಂದು ತಿಳಿಸಿದೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಲ್ಡ್ ಎಕನಾಮಿಕ್ ಫೋರಂಗೆ ಭೇಟಿ ನೀಡಲು ಸ್ವಿಡ್ಜರ್ ಲೆಂಡಿಗೆ ತೆರಳಿದ ಬೆನ್ನಲ್ಲೇ, ವರ್ಲ್ಡ್ ಎಕನಾಮಿಕ್ ಔಟ್ ಲುಕ್ ಸಂಸ್ಥೆಯೂ ಭಾರತದ ಜಿಡಿಪಿ ದರದ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, 2019ರಲ್ಲಿ ಭಾರತದ ಶೇ.7.8ಕ್ಕೆ ತಲುಪಲಿದೆ ಎಂದು ತಿಳಿಸಿದೆ.

ಪ್ರಸ್ತುತ ಚೀನಾದ ಜಿಡಿಪಿ ದರದ ಬೆಳವಣಿಗೆ ನಿಧಾನಗತಿಯಲ್ಲಿ ಸಾಗಿದ್ದು, ಇದೇ ಅವಧಿಯಲ್ಲಿ ಚೀನಾ ಜಿಡಿಪಿ ಶೇ.6.6ಕ್ಕೆ ಕುಸಿಯಲಿದೆ. ಅಲ್ಲದೆ ಭಾರತದ ಜಿಡಿಪಿ ದರ ಚೀನಾಕ್ಕಿಂತಲೂ ಜಾಸ್ತಿಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2016ರಲ್ಲಿ ಭಾರತದ ಜಿಡಿಪಿ ದರ ಶೇ.7.1ಕ್ಕೆ ತಲುಪಿದಾಗಲೂ ಸುಮ್ಮನಿದ್ದ, ಮೋದಿಯವರನ್ನು ಹೊಗಳದ ದೇಶದ ಕೆಲವರು ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ಜಿಡಿಪಿ ತುಸು ಕುಸಿದಿದ್ದನ್ನೇ ದೇಶದ ಆರ್ಥಿಕ ಬೆಳವಣಿಗೆ ತಳ ಮುಟ್ಟುತ್ತದೆ ಎಂದಿದ್ದರು. ಆದರೆ ದೇಶದಲ್ಲಿ ಜಾರಿಯಾದ ಆರ್ಥಿಕ ಸುಧಾರಣೆಗಳಿಂದಲೇ ಇಂದು ಭಾರತದ ಜಿಡಿಪಿ ಜಾಸ್ತಿಯಾಗುತ್ತಿದ್ದರೂ ಇವರು ಒಂದೇ ಒಂದು ಮಾತು ಆಡುತ್ತಿಲ್ಲ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search