• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾನ-ಮರ್ಯಾದೆ ಇಲ್ಲದ ಸಿಎಂ ಜತೆ ವೇದಿಕೆ ಹಂಚಿಕೊಳ್ಳಲ್ಲ ಎಂದು ದೇವೇಗೌಡರು ಹೇಳಿದ್ದೇಕೆ?

TNN Correspondent Posted On January 24, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದ ದಕ್ಷ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಹ ಗರಂ ಆಗಿದ್ದಾರೆ.

ಅದರಲ್ಲೂ ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆದೇಶ ನೀಡಿದ್ದರಿಂದ (ಈಗ ವಾಪಸ್ ಪಡೆಯಲಾಗಿದೆ) ಕುಪಿತರಾದ ಗೌಡರು, “ಮಾನ ಮರ್ಯಾದೆಯಿಲ್ಲದೆ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನದ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕ ಶಾಂತಿಯುತವಾಗಿ ನಡೆಯಲಿ ಎಂಬ ದೃಷ್ಟಿಯಿಂದ ಜಿಲ್ಲಾಧಿಕಾರಿ ರೋಹಿಣಿ  ಸಿಂಧೂರಿ ಅವರನ್ನು ವರ್ಗಾವಣೆ ಮಾಡಬೇಡಿ ಎಂದು ಮನವಿ ಮಾಡಿದರೂ, ವರ್ಗಾವಣೆಗೊಳಿಸಿದ್ದ ಸರ್ಕಾರದ ಕ್ರಮಕ್ಕೆ ದೇವೇಗೌಡರು ಸಿಟ್ಟಾಗಿದ್ದಾರೆ.

ಇಂತಹ ಕೆಟ್ಟ ಸರ್ಕಾರವನ್ನು ನಾನೆಂದೂ ನೋಡಿಲ್ಲ. ಮಹಮಸ್ತಕಾಭಿಷೇಕಕ್ಕೆ ರಕ್ಷಣೆ ಬೇಕು ಎಂಬ ಕಾರಣಕ್ಕೆ ಸಿಂಧೂರಿ ಅವರನ್ನು ವರ್ಗಾವಣೆ ಮಾಡಬೇಡಿ ಎಂದು ಮನವಿ ಮಾಡಿದ್ದೆ. ಆದರೆ ಗೃಹ ಇಲಾಖೆ ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂಥ ಸಿದ್ದರಾಮಯ್ಯನವರು ಇನ್ನು ಮುಂದೆ ಕೂತುಕೊಳ್ಳುವ ಸರ್ಕಾರಿ ಕಾರ್ಯಕ್ರಮದ ಯಾವುದೇ ವೇದಿಕೆಯನ್ನು ನಾನು ಹಂಚಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಫೆ.7ರಂದು ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಲಿದ್ದು, ಅವರಿಗೆ ನಾನು ಗೌರವ ಸಲ್ಲಿಸಬೇಕಿತ್ತು. ಆದರೆ ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವುದರಿಂದ ನಾನು ಕಾರ್ಯಕ್ರಮ ಬಹಿಷ್ಕರಿಸಿದ್ದೇನೆ ಎಂದು ವಿವರಿಸಿದ್ದಾರೆ.

ಇದನ್ನು ಯಾರಾದರೂ ಸರ್ಕಾರ ಎಂದು ಕರೆಯಲು ಸಾಧ್ಯವಾಗುತ್ತದೆಯೇ? ಈ ಸರ್ಕಾರದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದ್ದು, ಅವರೇ ರಕ್ಷಣಾ ಕಾರ್ಯದರ್ಶಿಗೆ ಭದ್ರತೆ ಒದಗಿಸಿ ಎಂದು ಮನವಿ ನೀಡುವಂತಾಗಿದೆ. ಕೆಂಪಯ್ಯ ಅಧೀನದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎನ್ನುತ್ತಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.

ವರ್ಗಾವಣೆ ಆದೇಶ ಹೊರಬೀಳುತ್ತಲೇ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿಯವರು ಐವರು ಅಧಿಕಾರಿಗಳ ವರ್ಗಾವಣೆ ಆದೇಶ ಹಿಂಪಡೆದಿದ್ದಾರೆ. ಆದರೂ ಸರ್ಕಾರಕ್ಕೆ ಇದರಿಂದ ಮುಖಭಂಗವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search