• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾನ-ಮರ್ಯಾದೆ ಇಲ್ಲದ ಸಿಎಂ ಜತೆ ವೇದಿಕೆ ಹಂಚಿಕೊಳ್ಳಲ್ಲ ಎಂದು ದೇವೇಗೌಡರು ಹೇಳಿದ್ದೇಕೆ?

TNN Correspondent Posted On January 24, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದ ದಕ್ಷ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಹ ಗರಂ ಆಗಿದ್ದಾರೆ.

ಅದರಲ್ಲೂ ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಆದೇಶ ನೀಡಿದ್ದರಿಂದ (ಈಗ ವಾಪಸ್ ಪಡೆಯಲಾಗಿದೆ) ಕುಪಿತರಾದ ಗೌಡರು, “ಮಾನ ಮರ್ಯಾದೆಯಿಲ್ಲದೆ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹಾಸನದ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕ ಶಾಂತಿಯುತವಾಗಿ ನಡೆಯಲಿ ಎಂಬ ದೃಷ್ಟಿಯಿಂದ ಜಿಲ್ಲಾಧಿಕಾರಿ ರೋಹಿಣಿ  ಸಿಂಧೂರಿ ಅವರನ್ನು ವರ್ಗಾವಣೆ ಮಾಡಬೇಡಿ ಎಂದು ಮನವಿ ಮಾಡಿದರೂ, ವರ್ಗಾವಣೆಗೊಳಿಸಿದ್ದ ಸರ್ಕಾರದ ಕ್ರಮಕ್ಕೆ ದೇವೇಗೌಡರು ಸಿಟ್ಟಾಗಿದ್ದಾರೆ.

ಇಂತಹ ಕೆಟ್ಟ ಸರ್ಕಾರವನ್ನು ನಾನೆಂದೂ ನೋಡಿಲ್ಲ. ಮಹಮಸ್ತಕಾಭಿಷೇಕಕ್ಕೆ ರಕ್ಷಣೆ ಬೇಕು ಎಂಬ ಕಾರಣಕ್ಕೆ ಸಿಂಧೂರಿ ಅವರನ್ನು ವರ್ಗಾವಣೆ ಮಾಡಬೇಡಿ ಎಂದು ಮನವಿ ಮಾಡಿದ್ದೆ. ಆದರೆ ಗೃಹ ಇಲಾಖೆ ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂಥ ಸಿದ್ದರಾಮಯ್ಯನವರು ಇನ್ನು ಮುಂದೆ ಕೂತುಕೊಳ್ಳುವ ಸರ್ಕಾರಿ ಕಾರ್ಯಕ್ರಮದ ಯಾವುದೇ ವೇದಿಕೆಯನ್ನು ನಾನು ಹಂಚಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಫೆ.7ರಂದು ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಲಿದ್ದು, ಅವರಿಗೆ ನಾನು ಗೌರವ ಸಲ್ಲಿಸಬೇಕಿತ್ತು. ಆದರೆ ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವುದರಿಂದ ನಾನು ಕಾರ್ಯಕ್ರಮ ಬಹಿಷ್ಕರಿಸಿದ್ದೇನೆ ಎಂದು ವಿವರಿಸಿದ್ದಾರೆ.

ಇದನ್ನು ಯಾರಾದರೂ ಸರ್ಕಾರ ಎಂದು ಕರೆಯಲು ಸಾಧ್ಯವಾಗುತ್ತದೆಯೇ? ಈ ಸರ್ಕಾರದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿದ್ದು, ಅವರೇ ರಕ್ಷಣಾ ಕಾರ್ಯದರ್ಶಿಗೆ ಭದ್ರತೆ ಒದಗಿಸಿ ಎಂದು ಮನವಿ ನೀಡುವಂತಾಗಿದೆ. ಕೆಂಪಯ್ಯ ಅಧೀನದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎನ್ನುತ್ತಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.

ವರ್ಗಾವಣೆ ಆದೇಶ ಹೊರಬೀಳುತ್ತಲೇ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಮುಖ್ಯಮಂತ್ರಿಯವರು ಐವರು ಅಧಿಕಾರಿಗಳ ವರ್ಗಾವಣೆ ಆದೇಶ ಹಿಂಪಡೆದಿದ್ದಾರೆ. ಆದರೂ ಸರ್ಕಾರಕ್ಕೆ ಇದರಿಂದ ಮುಖಭಂಗವಾಗಿದೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search