• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರು ಜಾರಿಗೊಳಿಸಿದ ಆ್ಯಂಟಿ ರೋಮಿಯೋ ಸ್ಕ್ವಾಡ್ ಹೇಗೆ ಕಾರ್ಯ ಮಾಡಿದೆ ಗೊತ್ತಾ?

TNN Correspondent Posted On January 24, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಒಂಬತ್ತು ತಿಂಗಳ ಹಿಂದೆ ಯೋಗಿ ಆದಿತ್ಯನಾಥರು ಅಧಿಕಾರ ವಹಿಸಿಕೊಳ್ಳುತ್ತಲೇ ರಾಜ್ಯದಲ್ಲಿ ನೈತಿಕಗಿರಿ ಕಾಪಾಡಲು ಮುಂದಾಗಿ, ಆ್ಯಂಟಿ ರೋಮಿಯೋ ಸ್ಕ್ವಾಡ್ ಎಂಬ ತಂಡ ರಚಿಸಿದ್ದರು. ಆಗ ಎಲ್ಲರೂ ಯೋಜನೆಗೆ ಗೇಲಿ, ವಿರೋಧ ಮಾಡಿದ್ದರು. ಆದರೆ ಈಗ ಈ ಸ್ಕ್ವಾಡ್ ಉತ್ತಮವಾಗಿ ಕೆಲಸ ಮಾಡಿದೆ.

ಹೌದು, ಕಳೆದ ಒಂಬತ್ತು ತಿಂಗಳಲ್ಲಿ ಆ್ಯಂಟಿ ರೋಮಿಯೋ ಸ್ಕ್ವಾಡ್, ಪ್ರತಿದಿನ ಆರರಂತೆ ಬರೋಬ್ಬರಿ 1706 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುವ, ದೈಹಿಕವಾಗಿ ಅಸಭ್ಯ ತೋರಿಸುವವರಿಗೆ ಬಿಸಿ ಮುಟ್ಟಿಸಲಾಗಿದೆ.

2017ರ ಮಾರ್ಚ್ 15ರಿಂದ ಡಿಸೆಂಬರ್ ವರೆಗೆ ಇಷ್ಟು ಪ್ರಕರಣ ದಾಖಲಿಸಿದ್ದು, ರಾಜ್ಯದಲ್ಲಿ ನೈತಿಕಗಿರಿತನ ಕಾಪಾಡಲಾಗಿದೆ ಎಂದು ಎಲ್ಲ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿಂದ ಮಾಹಿತಿ ಕೋರಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಅನುಚಿತವಾಗಿ ವರ್ತಿಸಿದ 9.33 ಲಕ್ಷ ಜನರಿಗೆ ಮತ್ತೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಸುಮಾರು 21 ಲಕ್ಷ ಜನರನ್ನು ಈ ಕುರಿತು ವಿಚಾರಣೆ ನಡೆಸಲಾಗಿದೆ. ಇದಕ್ಕಾಗಿ 7.97 ಲಕ್ಷ ಬಾರಿ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಅನುಚಿತವಾಗಿ ವರ್ತಿಸಿದ 1706 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಂದಿದೆ.

ಅಲ್ಲದೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಹಿನ್ನೆಲೆಯಲ್ಲಿ 3003 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಜನವರಿ 26ರಂದು ನಡೆಯುವ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಸಾಧನೆ ತಿಳಿಸುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. ಯೋಗಿ ಆದಿತ್ಯನಾಥರು ಜಾರಿಗೊಳಿಸಿದ ಹಲವು ಯೋಜನೆಗಳಲ್ಲಿ ಈ ಯೋಜನೆ ಉತ್ತಮ ಯಶಸ್ಸು ಸಾಧಿಸಿದೆ ಎಂದೇ ಹೇಳಲಾಗುತ್ತಿದೆ.

 

 

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search