• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯೋಗಿ ಆದಿತ್ಯನಾಥರು ಜಾರಿಗೊಳಿಸಿದ ಆ್ಯಂಟಿ ರೋಮಿಯೋ ಸ್ಕ್ವಾಡ್ ಹೇಗೆ ಕಾರ್ಯ ಮಾಡಿದೆ ಗೊತ್ತಾ?

TNN Correspondent Posted On January 24, 2018


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಒಂಬತ್ತು ತಿಂಗಳ ಹಿಂದೆ ಯೋಗಿ ಆದಿತ್ಯನಾಥರು ಅಧಿಕಾರ ವಹಿಸಿಕೊಳ್ಳುತ್ತಲೇ ರಾಜ್ಯದಲ್ಲಿ ನೈತಿಕಗಿರಿ ಕಾಪಾಡಲು ಮುಂದಾಗಿ, ಆ್ಯಂಟಿ ರೋಮಿಯೋ ಸ್ಕ್ವಾಡ್ ಎಂಬ ತಂಡ ರಚಿಸಿದ್ದರು. ಆಗ ಎಲ್ಲರೂ ಯೋಜನೆಗೆ ಗೇಲಿ, ವಿರೋಧ ಮಾಡಿದ್ದರು. ಆದರೆ ಈಗ ಈ ಸ್ಕ್ವಾಡ್ ಉತ್ತಮವಾಗಿ ಕೆಲಸ ಮಾಡಿದೆ.

ಹೌದು, ಕಳೆದ ಒಂಬತ್ತು ತಿಂಗಳಲ್ಲಿ ಆ್ಯಂಟಿ ರೋಮಿಯೋ ಸ್ಕ್ವಾಡ್, ಪ್ರತಿದಿನ ಆರರಂತೆ ಬರೋಬ್ಬರಿ 1706 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುವ, ದೈಹಿಕವಾಗಿ ಅಸಭ್ಯ ತೋರಿಸುವವರಿಗೆ ಬಿಸಿ ಮುಟ್ಟಿಸಲಾಗಿದೆ.

2017ರ ಮಾರ್ಚ್ 15ರಿಂದ ಡಿಸೆಂಬರ್ ವರೆಗೆ ಇಷ್ಟು ಪ್ರಕರಣ ದಾಖಲಿಸಿದ್ದು, ರಾಜ್ಯದಲ್ಲಿ ನೈತಿಕಗಿರಿತನ ಕಾಪಾಡಲಾಗಿದೆ ಎಂದು ಎಲ್ಲ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿಂದ ಮಾಹಿತಿ ಕೋರಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಅನುಚಿತವಾಗಿ ವರ್ತಿಸಿದ 9.33 ಲಕ್ಷ ಜನರಿಗೆ ಮತ್ತೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಸುಮಾರು 21 ಲಕ್ಷ ಜನರನ್ನು ಈ ಕುರಿತು ವಿಚಾರಣೆ ನಡೆಸಲಾಗಿದೆ. ಇದಕ್ಕಾಗಿ 7.97 ಲಕ್ಷ ಬಾರಿ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಅನುಚಿತವಾಗಿ ವರ್ತಿಸಿದ 1706 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಂದಿದೆ.

ಅಲ್ಲದೆ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಹಿನ್ನೆಲೆಯಲ್ಲಿ 3003 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಜನವರಿ 26ರಂದು ನಡೆಯುವ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಸಾಧನೆ ತಿಳಿಸುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. ಯೋಗಿ ಆದಿತ್ಯನಾಥರು ಜಾರಿಗೊಳಿಸಿದ ಹಲವು ಯೋಜನೆಗಳಲ್ಲಿ ಈ ಯೋಜನೆ ಉತ್ತಮ ಯಶಸ್ಸು ಸಾಧಿಸಿದೆ ಎಂದೇ ಹೇಳಲಾಗುತ್ತಿದೆ.

 

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search