• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳ ಸರ್ಕಾರದ ಉದ್ದಟತನ, ಭಾಗವತ್ ಧ್ವಜಾರೋಹಣಕ್ಕೆ ಅವಕಾಶ ಬೇಡ ಎಂದು ಪರೋಕ್ಷ ಆದೇಶ

TNN Correspondent Posted On January 24, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕಮ್ಯುನಿಸ್ಟ್ ಪಕ್ಷದ ಜನರು ಒಂದೆಡೆಯಾದರೆ, ಕೇರಳ ಸರ್ಕಾರವೂ ತನ್ನ ಹಿಂದೂ ವಿರೋಧಿ ನೀತಿಯನ್ನು ಮುಂದುವರಿಸಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜನವರಿ 26 ಗಣರಾಜ್ಯೋತ್ಸವದಂದು ಕೇರಳದ ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡುತ್ತಾರೆ ಎಂದು ತಿಳಿದ ಸರ್ಕಾರ, ರಾಜ್ಯದ ಎಲ್ಲ ಶಾಲೆ, ಕಾಲೇಜು ಆಡಳಿತ ಮಂಡಳಿಗಳಿಗೆ ವಿಚಿತ್ರವಾದ ಆದೇಶ ಹೊರಡಿಸಿದೆ. ಈ ಮೂಲಕ ಮೋಹನ್ ಭಾಗವತ್ ಧ್ವಜಾರೋಹಣ ತಡೆಯುವ ಹಿಂಬಾಗಿಲ ತಂತ್ರ ಕೇರಳ ಸರ್ಕಾರ ಮಾಡಿದ್ದು, ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೆ ಕೇರಳದ ಶಾಲೆಯೊಂದರಲ್ಲಿ ಆಗಸ್ಟ್ 15ರಂದು ಮೋಹನ್ ಭಾಗವತ್ ಧ್ವಜಾರೋಹಣ ಮಾಡಿದ್ದರಿಂದ ಶಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇರಳ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಜನವರಿ 15ರಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಲಿರುವ ಮೋಹನ್ ಭಾಗವತ್ ಧ್ವಜಾರೋಹಣ ಮಾಡುವುದು ನಿಗದಿಯಾಗಿತ್ತು. ಅವರನ್ನು ಗುರಿಯಾಗಿಟ್ಟುಕೊಂಡು ಕೇರಳ ಸರ್ಕಾರ ಹೊಸ ಆದೇಶ ಹೊರಡಿಸಿ, ಭಾಗವತ್ ಧ್ವಜಾರೋಹಣ ತಡೆಯುವ ಹುನ್ನಾರ ನಡೆಸಿದೆ.
ಜ.26ರಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೇರಳದ ಪಲಕ್ಕಡಕ್ಕೆ ಮೋಹನ್ ಭಾಗವತ್ ಆಗಮಿಸುತ್ತಿದ್ದು, ಆ ವೇಳೆ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿಸುವ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು.
ಏನಿದೆ ಆದೇಶದಲ್ಲಿ
ಜನಪ್ರತಿನಿಧಿಗಳು, ಸರ್ಕಾರದ ಅಧಿಕಾರಿಗಳು ಮಾತ್ರ ಧ್ವಜಾರೋಹಣ ಮಾಡಬೇಕು. ಶಾಲಾ, ಕಾಲೇಜುಗಳಲ್ಲಿ ಆಯಾ ವಿಭಾಗದ ಮುಖ್ಯಸ್ಥರು, ಸಂಸ್ಥೆಯ ಅಧಿಕೃತ ವ್ಯಕ್ತಿಗಳು, ಕಚೇರಿಯ ಸಿಬ್ಬಂದಿ ಮಾತ್ರ ಧ್ವಜಾರೋಹಣ ಮಾಡಬೇಕು. ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ, ಪಂಚಾಯಿತಿ ಮಟ್ಟದಲ್ಲಿ ಆಯಾ ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ಧ್ವಜಾರೋಹಣ ಮಾಡಬೇಕು.
ಹೀಗೆ ಪರೋಕ್ಷವಾಗಿ ಭಾಗವತ್ ಧ್ವಜಾರೋಹಣಕ್ಕೆ ಅವಕಾಶ ತಪ್ಪಿಸಲು ಕೇರಳ ಸರ್ಕಾರ ಹುನ್ನಾರ ನಡೆಸಿರುವುದು ಸ್ಪಷ್ಟವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಮೋಹನ್ ಭಾಗವತ್ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೇರಳ ಸರ್ಕಾರ ದುರುದ್ದೇಶಪೂರ್ವಕವಾಗಿ ಇಂತಹ ಆದೇಶಗಳನ್ನು ಹೊರಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search