• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸುಪ್ರೀಂ ಆದೇಶವಿದ್ದರೂ ಜನರ ಪ್ರತಿಭಟನೆ, ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಪದ್ಮಾವತ್ ಸ್ಥಗಿತ!

TNN Correspondent Posted On January 25, 2018


  • Share On Facebook
  • Tweet It

ದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುವಿವಾದಿತ ಚಿತ್ರ ಪದ್ಮಾವತ್ ಬಿಡುಗಡೆಗೆ ಸುಪ್ರೀಂ ಕೋರ್ಟೇ ಹಸಿರು ನಿಶಾನೆ ತೋರಿದರೂ, ಜನರ ಆಕ್ರೋಶ ಎದುರು ನಾಲ್ಕು ರಾಜ್ಯಗಳಲ್ಲಿ ಸಿನಿಮಾಗೆ ಹಿನ್ನಡೆಯಾಗುವ ಎಲ್ಲ ಲಕ್ಷಣ ಗೋಚರಿಸಿವೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜನವರಿ 25ರಂದು ದೇಶದ ಎಲ್ಲ ರಾಜ್ಯಗಳಲ್ಲಿ ಪದ್ಮಾವತ್ ಬಿಡುಗಡೆಯಾಗಬೇಕಿತ್ತು. ಆದರೆ ನಾಲ್ಕು ರಾಜ್ಯಗಳಲ್ಲಿ ಹೋರಾಟ ತೀರ್ವಸ್ವರೂಪ ಕಂಡಿರುವುದರಿಂದ, ಸಿನಿಮಾ ಬಿಡುಗಡೆಗೆ ರಜಪೂತರ ಎಲ್ಲಿಲ್ಲದ ಖಂಡನೆ ವ್ಯಕ್ತಪಡಿಸಿರುವುದರಿಂದ ಹೆದರಿದ ಭಾರತೀಯ ಮಲ್ಟಿಪ್ಲಕ್ಸ್ ಅಸೋಸಿಯೇಷನ್ ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಘೋಷಿಸಿದೆ.

ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಗೋವಾ ಮತ್ತು ಗುಜರಾತ್ ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಪದ್ಮಾವತ್ ಸಿನಿಮಾ ಪ್ರದರ್ಶನವಾಗುವುದಿಲ್ಲ. ದೇಶದ ಸುಮಾರು ಶೇ.75ರಷ್ಟು ಮಲ್ಟಿಪ್ಲೆಕ್ಸ್ ಗಳು ಈ ಅಸೋಸಿಯೇಷನ್ ಗೆ ಒಳಪಟ್ಟಿರುವುದರಿಂದ ನಾಲ್ಕು ರಾಜ್ಯಗಳ ಬಹುತೇಕ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಬಿಡುಗಡೆಯಾಗದಿರುವುದು ಖಾತ್ರಿಯಾಗಿದೆ.

ಸ್ಥಳೀಯ ಆಡಳಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮನವಿ ಮಾಡಿರುವ ಕಾರಣ ನಾಲ್ಕು ರಾಜ್ಯಗಳಲ್ಲಿ ಸಿನಿಮಾ ಸ್ಥಗಿತಗೊಳಿಸಲಾಗುವುದು ಎಂದು ಭಾರತೀಯ ಮಲ್ಟಿಪ್ಲಕ್ಸ್ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಅಶೇರ್ ಮಾಹಿತಿ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಕಪೂರ್ ಅಭಿನಯದ ಪದ್ಮಾವತ್ ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ದೇಶಾದ್ಯಂತ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗ ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಸ್ಥಗಿತಗೊಳಿಸುತ್ತಿದ್ದು, ಉಳಿದ ರಾಜ್ಯಗಳಲ್ಲಿ ಸಿನಿಮಾಗೆ ಹೇಗೆ ಪ್ರತಿಕ್ರಿಯೆ ಸಿಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಆದಾಗ್ಯೂ ಸಂಜಯ್ ಲೀಲಾ ಬನ್ಸಾಲಿ ಹಿಂದೂಗಳ ವಿರುದ್ಧವೇ ಸಿನಿಮಾ ಮಾಡುತ್ತಾರೆ ಎಂಬ ಆರೋಪ ಹೊತ್ತಿದ್ದು, ಪದ್ಮಾವತ್ ವಿಷಯದಲ್ಲಿ ಹೈರಾಣಾಗಿದ್ದಂತೂ ಸುಳ್ಳಲ್ಲ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search