• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಪ್ರೀಂ ಆದೇಶವಿದ್ದರೂ ಜನರ ಪ್ರತಿಭಟನೆ, ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಪದ್ಮಾವತ್ ಸ್ಥಗಿತ!

TNN Correspondent Posted On January 25, 2018
0


0
Shares
  • Share On Facebook
  • Tweet It

ದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುವಿವಾದಿತ ಚಿತ್ರ ಪದ್ಮಾವತ್ ಬಿಡುಗಡೆಗೆ ಸುಪ್ರೀಂ ಕೋರ್ಟೇ ಹಸಿರು ನಿಶಾನೆ ತೋರಿದರೂ, ಜನರ ಆಕ್ರೋಶ ಎದುರು ನಾಲ್ಕು ರಾಜ್ಯಗಳಲ್ಲಿ ಸಿನಿಮಾಗೆ ಹಿನ್ನಡೆಯಾಗುವ ಎಲ್ಲ ಲಕ್ಷಣ ಗೋಚರಿಸಿವೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜನವರಿ 25ರಂದು ದೇಶದ ಎಲ್ಲ ರಾಜ್ಯಗಳಲ್ಲಿ ಪದ್ಮಾವತ್ ಬಿಡುಗಡೆಯಾಗಬೇಕಿತ್ತು. ಆದರೆ ನಾಲ್ಕು ರಾಜ್ಯಗಳಲ್ಲಿ ಹೋರಾಟ ತೀರ್ವಸ್ವರೂಪ ಕಂಡಿರುವುದರಿಂದ, ಸಿನಿಮಾ ಬಿಡುಗಡೆಗೆ ರಜಪೂತರ ಎಲ್ಲಿಲ್ಲದ ಖಂಡನೆ ವ್ಯಕ್ತಪಡಿಸಿರುವುದರಿಂದ ಹೆದರಿದ ಭಾರತೀಯ ಮಲ್ಟಿಪ್ಲಕ್ಸ್ ಅಸೋಸಿಯೇಷನ್ ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಘೋಷಿಸಿದೆ.

ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಗೋವಾ ಮತ್ತು ಗುಜರಾತ್ ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಪದ್ಮಾವತ್ ಸಿನಿಮಾ ಪ್ರದರ್ಶನವಾಗುವುದಿಲ್ಲ. ದೇಶದ ಸುಮಾರು ಶೇ.75ರಷ್ಟು ಮಲ್ಟಿಪ್ಲೆಕ್ಸ್ ಗಳು ಈ ಅಸೋಸಿಯೇಷನ್ ಗೆ ಒಳಪಟ್ಟಿರುವುದರಿಂದ ನಾಲ್ಕು ರಾಜ್ಯಗಳ ಬಹುತೇಕ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಬಿಡುಗಡೆಯಾಗದಿರುವುದು ಖಾತ್ರಿಯಾಗಿದೆ.

ಸ್ಥಳೀಯ ಆಡಳಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮನವಿ ಮಾಡಿರುವ ಕಾರಣ ನಾಲ್ಕು ರಾಜ್ಯಗಳಲ್ಲಿ ಸಿನಿಮಾ ಸ್ಥಗಿತಗೊಳಿಸಲಾಗುವುದು ಎಂದು ಭಾರತೀಯ ಮಲ್ಟಿಪ್ಲಕ್ಸ್ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಅಶೇರ್ ಮಾಹಿತಿ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಕಪೂರ್ ಅಭಿನಯದ ಪದ್ಮಾವತ್ ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ದೇಶಾದ್ಯಂತ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗ ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಸ್ಥಗಿತಗೊಳಿಸುತ್ತಿದ್ದು, ಉಳಿದ ರಾಜ್ಯಗಳಲ್ಲಿ ಸಿನಿಮಾಗೆ ಹೇಗೆ ಪ್ರತಿಕ್ರಿಯೆ ಸಿಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಆದಾಗ್ಯೂ ಸಂಜಯ್ ಲೀಲಾ ಬನ್ಸಾಲಿ ಹಿಂದೂಗಳ ವಿರುದ್ಧವೇ ಸಿನಿಮಾ ಮಾಡುತ್ತಾರೆ ಎಂಬ ಆರೋಪ ಹೊತ್ತಿದ್ದು, ಪದ್ಮಾವತ್ ವಿಷಯದಲ್ಲಿ ಹೈರಾಣಾಗಿದ್ದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search