• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಪ್ರೀಂ ಆದೇಶವಿದ್ದರೂ ಜನರ ಪ್ರತಿಭಟನೆ, ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಪದ್ಮಾವತ್ ಸ್ಥಗಿತ!

TNN Correspondent Posted On January 25, 2018
0


0
Shares
  • Share On Facebook
  • Tweet It

ದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹುವಿವಾದಿತ ಚಿತ್ರ ಪದ್ಮಾವತ್ ಬಿಡುಗಡೆಗೆ ಸುಪ್ರೀಂ ಕೋರ್ಟೇ ಹಸಿರು ನಿಶಾನೆ ತೋರಿದರೂ, ಜನರ ಆಕ್ರೋಶ ಎದುರು ನಾಲ್ಕು ರಾಜ್ಯಗಳಲ್ಲಿ ಸಿನಿಮಾಗೆ ಹಿನ್ನಡೆಯಾಗುವ ಎಲ್ಲ ಲಕ್ಷಣ ಗೋಚರಿಸಿವೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜನವರಿ 25ರಂದು ದೇಶದ ಎಲ್ಲ ರಾಜ್ಯಗಳಲ್ಲಿ ಪದ್ಮಾವತ್ ಬಿಡುಗಡೆಯಾಗಬೇಕಿತ್ತು. ಆದರೆ ನಾಲ್ಕು ರಾಜ್ಯಗಳಲ್ಲಿ ಹೋರಾಟ ತೀರ್ವಸ್ವರೂಪ ಕಂಡಿರುವುದರಿಂದ, ಸಿನಿಮಾ ಬಿಡುಗಡೆಗೆ ರಜಪೂತರ ಎಲ್ಲಿಲ್ಲದ ಖಂಡನೆ ವ್ಯಕ್ತಪಡಿಸಿರುವುದರಿಂದ ಹೆದರಿದ ಭಾರತೀಯ ಮಲ್ಟಿಪ್ಲಕ್ಸ್ ಅಸೋಸಿಯೇಷನ್ ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಘೋಷಿಸಿದೆ.

ಪ್ರತಿಭಟನೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಗೋವಾ ಮತ್ತು ಗುಜರಾತ್ ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಪದ್ಮಾವತ್ ಸಿನಿಮಾ ಪ್ರದರ್ಶನವಾಗುವುದಿಲ್ಲ. ದೇಶದ ಸುಮಾರು ಶೇ.75ರಷ್ಟು ಮಲ್ಟಿಪ್ಲೆಕ್ಸ್ ಗಳು ಈ ಅಸೋಸಿಯೇಷನ್ ಗೆ ಒಳಪಟ್ಟಿರುವುದರಿಂದ ನಾಲ್ಕು ರಾಜ್ಯಗಳ ಬಹುತೇಕ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಬಿಡುಗಡೆಯಾಗದಿರುವುದು ಖಾತ್ರಿಯಾಗಿದೆ.

ಸ್ಥಳೀಯ ಆಡಳಿತ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮನವಿ ಮಾಡಿರುವ ಕಾರಣ ನಾಲ್ಕು ರಾಜ್ಯಗಳಲ್ಲಿ ಸಿನಿಮಾ ಸ್ಥಗಿತಗೊಳಿಸಲಾಗುವುದು ಎಂದು ಭಾರತೀಯ ಮಲ್ಟಿಪ್ಲಕ್ಸ್ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಅಶೇರ್ ಮಾಹಿತಿ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಹಾಗೂ ರಣವೀರ್ ಕಪೂರ್ ಅಭಿನಯದ ಪದ್ಮಾವತ್ ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ದೇಶಾದ್ಯಂತ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗ ನಾಲ್ಕು ರಾಜ್ಯಗಳ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ಸ್ಥಗಿತಗೊಳಿಸುತ್ತಿದ್ದು, ಉಳಿದ ರಾಜ್ಯಗಳಲ್ಲಿ ಸಿನಿಮಾಗೆ ಹೇಗೆ ಪ್ರತಿಕ್ರಿಯೆ ಸಿಗುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಆದಾಗ್ಯೂ ಸಂಜಯ್ ಲೀಲಾ ಬನ್ಸಾಲಿ ಹಿಂದೂಗಳ ವಿರುದ್ಧವೇ ಸಿನಿಮಾ ಮಾಡುತ್ತಾರೆ ಎಂಬ ಆರೋಪ ಹೊತ್ತಿದ್ದು, ಪದ್ಮಾವತ್ ವಿಷಯದಲ್ಲಿ ಹೈರಾಣಾಗಿದ್ದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search