• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ನರೇಂದ್ರ ಮೋದಿ ಅವರನ್ನೆ ಸೆಳೆದ ಆ ಪುಟ್ಟ ಬಾಲಕಿ ಕಾರ್ಯ ಎಲ್ಲರಿಗೂ ಮಾದರಿ

TNN Correspondent Posted On January 25, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಚಾನಲ್ ಗಳಿಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಅವರ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು, ಅಲ್ಲದೇ ಪ್ರಧಾನ ಮಂತ್ರಿ ಫಲ ಭೀಮಾ ಯೋಜನೆ ಅಚ್ಚುಕಟ್ಟಾಗಿ ಜಾರಿಗೆ ತಂದಿದ್ದಕ್ಕೆ ಬೀದರ ಸಂಸದ ಭಗವಂತ ಖೂಬಾ ಅವರನ್ನು ಶ್ಲಾಘಿಸಿದ್ದರು. ಇದೀಗ ಕಾಶ್ಮೀರದ ಪುಟ್ಟ ಹುಡುಗಿ ತನ್ನ ಕಾರ್ಯದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಶ್ಲಾಘನೆಗೆ ಪಾತ್ರಳಾಗಿದ್ದಾಳೆ.

ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಬಾಲಕಿ ತನ್ನ ಕಾರ್ಯ ನಿರ್ವಹಿಸಿದ್ದು, ಕಸದಿಂದ ತುಂಬಿ ಹೋಗಿರುವ ಕಾಶ್ಮೀರದ ದಲಾಯಿ ಕೆರೆಯನ್ನು ಸ್ವಚ್ಛತೆ ಮಾಡುವ ಮೂಲಕ, ಆ ಕೆರೆಯನ್ನು ಉಳಿಸೋಣ, ಇಲ್ಲಿ ಯಾರು ಕಸವನ್ನು ಹಾಕಬೇಡಿ ಎಂಬ ಸಂದೇಶವಿರುವ ವಿಡಿಯೋ ಸಾಮಾಜಿಕ ಜಾಲಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಇದನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ನಲ್ಲಿ ಶೇರ್ ಮಾಡಿ, ಬಾಲಕಿ ನೀಡಿರುವ ಸಂದೇಶಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ಸ್ವಚ್ಛ ಭಾರತ ಕಲ್ಪನೆಗೆ ಪೂರಕವಾಗಿ ಪುಟ್ಟ ಪೋರಿ ಮತ್ತು ಅವಳ ತಂದೆ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದ್ದು, ಕಸವನ್ನು ಹಡಗಿನಲ್ಲಿ ತುಂಬಿಕೊಂಡು ಕೆರೆ ಸ್ವಚ್ಛ ಮಾಡಿದ್ದಾಳೆ. ನಾನೋಬ್ಬಳೇ ಮಾಡಿದರೇ ಕೆರೆ ಸ್ವಚ್ಛವಾಗುವುದಿಲ್ಲ. ಎಲ್ಲರೂ ಕಾರ್ಯಕ್ಕೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾಳೆ. ಸುಂದರವಾದ ದಾಲ್ ಕೆರೆಯನ್ನು ರಕ್ಷಿಸಬೇಕು, ಅದನ್ನು ಕಲುಷಿತಗೊಳಿಸಬೇಡಿ ಎಂದು ಮುಗ್ದ ಮಾತುಗಳ ಮೂಲಕ ವಾಸ್ತವದ ಸಂದೇಶ ನೀಡಿದ್ದಾಳೆ.

The heaven on earth won't remain the same if we continue to pollute its beautiful lakes. This little girl seems to be giving the same message as she herself takes the responsibility of cleaning picturesque Dal Lake in Kashmir
Sunrise in Kashmir pic.twitter.com/qLc5Q51BIT

— Aviator Anil Chopra (@Chopsyturvey) January 21, 2018

ಪುಟ್ಟ ಬಾಲಕಿ ನೀಡಿರುವ ಸಂದೇಶಕ್ಕೆ ಮಾರು ಹೋಗಿರುವ ಪ್ರಧಾನಿ ನರೇಂದ್ರ ಮೋದಿ ‘ಇಲ್ಲಿ ನೋಡಿ ಈ ಪುಟ್ಟ ಬಾಲಕಿ ತನ್ನ ಮುಂಜಾನೆಯನ್ನು ಹೇಗೆ ಸಾರ್ಥಕ ಮಾಡಿದ್ದಾಳೆ. ಸ್ವಚ್ಛ ಭಾರತ ಹವ್ಯಾಸ ರೂಡಿಸಿಕೊಂಡಿದ್ದಾಳೆ. ಇವಳ ಕಾರ್ಯ ಶ್ಲಾಘನೀಯ ಎಂದು ವಿಡಿಯೋ ಹಂಚಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search