• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರ ವಿರುದ್ಧ ಅವಹೇಳನಕಾರಿ ಹೇಳಿಕೆ, ಎಸ್ಪಿ ಮುಖಂಡನ ವಿರುದ್ಧ ಎಫ್ಐಆರ್

TNN Correspondent Posted On January 25, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥರು ಅಧಿಕಾರ ಸ್ವೀಕರಿಸಿದ ಬಳಿಕ ಕೈಗೊಂಡ ಹಲವು ದಿಟ್ಟ ನಿರ್ಧಾರಗಳನ್ನು ಬಹುತೇಕ ಜನ ಮೆಚ್ಚಿದರೂ, ವಿರೋಧಿಸುವವರಿಗೇನೂ ಕಡಿಮೆ ಇಲ್ಲ. ಅದರಲ್ಲೂ ಯೋಗಿ ಆದಿತ್ಯನಾಥರನ್ನು ಹೇಗಾದರೂ ಮಾಡಿ ಟೀಕಿಸಲೇಬೇಕು ಎಂಬ ಮನಸ್ಥಿತಿಯವರೂ ಇಲ್ಲದಿಲ್ಲ.

ಈ ಮನಸ್ಥಿತಿಯ ಭಾಗವಾಗಿ ಯೋಗಿ ಆದಿತ್ಯನಾಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಕಮ್ಲಾ ಪ್ರಸಾದ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಜೈಲುವಾಸಿಯಾಗಿರುವ ಸ್ವಯಂಘೋಷಿತ ದೇವಮಾನವನೊಬ್ಬನನ್ನು ಉಲ್ಲೇಖಿಸಿದ ರಾವತ್, ಸ್ವಯಂ ಘೋಷಿತ ದೇವಮಾನವನಿಗೂ ಹಾಗೂ ಯೋಗಿ ಆದಿತ್ಯನಾಥರಿಗೂ ಸಂಪರ್ಕವಿದೆ ಎಂದು ಜನವರಿ 20ರಂದು ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು.

ಈಗ ಪ್ರಸಾದ್ ಹೇಳಿಕೆ ಖಂಡಿಸಿ ಹಿಂದೂ ಯುವ ವಾಹಿನಿ ಜಿಲ್ಲಾ ಉಸ್ತುವಾರಿ ರವಿ ಸಿಂಗ್ ಎಂಬುವವರು ದರಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾವತ್ ಅವರ ಹೇಳಿಕೆಯಿಂದ ಯೋಗಿ ಆದಿತ್ಯನಾಥರ ವರ್ಚಸ್ಸು ಹಾಗೂ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆಯಾಗಿರುವ ಕಾರಣದಿಂದ ರಾವತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರವಿ ಸಿಂಗ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search