• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ವಿರುದ್ಧವೇ ಮಾತನಾಡಿದ್ದ ಅಜಂ ಖಾನ್ ಗೆ ಸೇನೆ ಉಡುಗೊರೆ ನೀಡಿ ಅವರ ಮನಸ್ಸು ಬದಲಿಸಿದ್ದು ಹೇಗೆ ಗೊತ್ತಾ?

TNN Correspondent Posted On January 25, 2018
0


0
Shares
  • Share On Facebook
  • Tweet It

ಲಖನೌ: ಭಾರತೀಯ ಸೇನೆ, ಸೈನಿಕರು ಎಂದರೇನೆ ಹಾಗೆ. ಅವರು ಸ್ಫೂರ್ತಿಯ ಚಿಲುಮೆ. ಎಂತಹ ಕಲ್ಲು ಮನಸ್ಸುಗಳನ್ನೂ ದೇಶಭಕ್ತಿಯೆಡೆಗೆ, ಸೈನ್ಯದ ಮೇಲೆ ಹೆಮ್ಮೆ ಮೂಡಿಸುವೆಡೆಗೆ ಕೊಂಡೊಯುತ್ತಾರೆ. ಇದಕ್ಕೆ ಈಗ ಮತ್ತೊಂದು ನಿದರ್ಶನ ಸಿಕ್ಕಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿರುವ ಮೊಹಮ್ಮದ್ ಅಲಿ ಜೌಹಾರ್ ವಿವಿಯ ಕುಲಪತಿ, ಸಚಿವ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹಲವು ಬಾರಿ ಸೈನ್ಯದ ವಿರುದ್ಧ ಮಾತನಾಡಿ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡವರು. ಆದರೆ ಅವರಿಗೆ ಭಾರತೀಯ ಸೇನೆ ವತಿಯಿಂದ ಸೋವಿಯತ್ ಇರಾ ಟಿ-55 ಯುದ್ಧ ಟ್ಯಾಂಕರ್ ನೀಡುವ ಮೂಲಕ ಭಾರತೀಯ ಸೇನೆ ಮೇಲೆ ಹೆಮ್ಮ ಮೂಡುವಂತೆ ಮಾಡಲಾಗಿದೆ.

ಅಜಂ ಖಾನ್ ಅವರಿಗೆ ಟ್ಯಾಂಕರ್ ಹಸ್ತಾಂತರಿಸುವ ಮೂಲಕ ನೂತನ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಯುದ್ಧ ಟ್ಯಾಂಕರ್ ಪ್ರತಿಷ್ಠಾಪಿಸಲಾಗಿದೆ.

ಭಾರತೀಯ ಸೇನೆಯ ಯುದ್ಧ ಟ್ಯಾಂಕರ್ ಒಂದು ಖಾಸಗಿ ವಿವಿಗೆ ನೀಡಬೇಕು ಎಂದು ಮನವಿ ಮಾಡಿದ್ದೆ. ಸೇನೆ ಅದನ್ನು ಒದಗಿಸಿದ್ದು, ನಮ್ಮ ಹಾಗೂ ಸೈನಿಕರ ಜತೆ ಉತ್ತಮ ಸಂಬಂಧವಿದೆ ಎಂದು ಅಜಂ ಖಾನ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಮಾರ್ಗದರ್ಶನಕ್ಕಾಗಿ ಟ್ಯಾಂಕರ್ ಬೇಕು ಎಂದು ಅಜಂ ಮನವಿಯಲ್ಲಿ ತಿಳಿಸಿದ್ದರು. ಅದರಂತೆ ಟ್ಯಾಂಕರ್ ನೀಡಲಾಗಿದೆ.

1968ರಲ್ಲಿ ಈ ಯುದ್ಧ ಟ್ಯಾಂಕರ್ ಅನ್ನು ಭಾರತೀಯ ಸೇನೆ ಅವಳಡಿಸಿಕೊಂಡಿದ್ದು, 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಟ್ಯಾಂಕರ್ ಪ್ರಮುಖ ಪಾತ್ರ ನಿರ್ವಹಿಸಿತ್ತು. ಅಲ್ಲದೆ 2011ರವರೆಗೂ ಟ್ಯಾಂಕರ್ ಸೇನೆಯಲ್ಲಿ ಕಾರ್ಯನಿರ್ವಹಿಸಿತ್ತು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search