• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯಶಸ್ವಿಯಾಗಲಿಲ್ಲ ಕೃತಕ ಬಂದ್, ಉತ್ತರ ಕರ್ನಾಟಕದಲ್ಲೇ ಇಲ್ಲ ಬೆಂಬಲ

TNN Correspondent Posted On January 25, 2018


  • Share On Facebook
  • Tweet It

ಬೆಂಗಳೂರು: ಮಹದಾಯಿ ವಿಚಾರವಾಗಿ ರಾಜಕೀಯ ಪ್ರೇರಿತವಾಗಿ ಕರೆ ನೀಡಿದ್ದ ಕರ್ನಾಟಕ ಬಂದ್ ಎಂಬ ಕೃತಕ ನಾಟಕಕ್ಕೆ ರಾಜ್ಯದ ಜನ ಬೆಂಬಲ ನೀಡಿಲ್ಲ. ಇದರಿಂದ ಸರ್ಕಾರದ ಮಾತು ಕೇಳಿದ್ದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನೆಲೆಯಲ್ಲಿ ಜನವರಿ 27ರಂದು ನಿಗದಿಯಾಗಿದ್ದ ಕರ್ನಾಟಕ ಬಂದ್ಅನ್ನು ಜನವರಿ 25ರಂದೇ ಮಾಡಲು ಸೂಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿನ್ನಡೆಯಾದಂತಾಗಿದೆ.

ರಾಜ್ಯದ ಬಹುತೇಕ ಕಡೆ ಮಹದಾಯಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಸುಗಮವಾಗಿ ಸಾಗುತ್ತಿದೆ. ಉತ್ತರ ಮಹದಾಯಿ ನದಿ ನೀರಿನ ಪ್ರಮುಖ ಫಲಾನುಭವಿಗಳಾದ ಉತ್ತರ ಕರ್ನಾಟಕದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರದಲ್ಲಂತೂ ಬಂದ್ ಬಿಸಿ ತಟ್ಟದೆ, ವ್ಯಾಪಾರ ವಹಿವಾಟು ಸುಗಮವಾಗಿ ಸಾಗುತ್ತಿದೆ. ಅಂಗಡಿಮುಂಗಟ್ಟು ತೆರೆದಿದ್ದು, ಜನ ಎಂದಿನಂತೆ ತಿರುಗಾಡುತ್ತಿದ್ದಾರೆ. ಸರ್ಕಾರದ ಮಾತು ಕೇಳಿದ ತಪ್ಪಿಗೆ ಹಲವು ಕನ್ನಡಪರ ಸಂಘಟನೆಗಳು ಮಾತ್ರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದು ಬಿಟ್ಟರೆ ಇನ್ನಾವುದೇ ತೊಂದರೆಯಾಗಿಲ್ಲ.

ಇದು ಉತ್ತರ ಕರ್ನಾಟಕದ ಪರಿಸ್ಥಿತಿಯಾದರೆ, ಬೇರೆ ಭಾಗದಲ್ಲೂ ಪರಿಸ್ಥಿತಿ ಭಿನ್ನವಾಗೇನಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡದ ಶಿರಸಿ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೊಡಗು ಜಿಲ್ಲೆಗಳಲ್ಲೂ ಬಂದ್ ಗೆ ಅತೀ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರದ ಆಣತಿ ಮೇರೆಗೆ ಬಂದ್ ಗೆ ಕೆಎಸ್ಆರ್ಟಿಸಿ ಬೆಂಬಲ ನೀಡಿರುವುದರಿಂದ ಬೆಂಗಳೂರು ಸುತ್ತಲೂ ಬಸ್ ಸಂಚಾರ ಅಸ್ತವ್ಯಸ್ತವಾಗಿದ್ದು ಬಿಟ್ಟರೆ ಅಷ್ಟೇನೂ ಪ್ರಭಾವ ಬೀರಿಲ್ಲ.

ಒಟ್ಟಿನಲ್ಲಿ ಸರ್ಕಾರದ ರಾಜಕೀಯ ಪ್ರೇರಿತ ಮಾತು ಕೇಳಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search