• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯಶಸ್ವಿಯಾಗಲಿಲ್ಲ ಕೃತಕ ಬಂದ್, ಉತ್ತರ ಕರ್ನಾಟಕದಲ್ಲೇ ಇಲ್ಲ ಬೆಂಬಲ

TNN Correspondent Posted On January 25, 2018
0


0
Shares
  • Share On Facebook
  • Tweet It

ಬೆಂಗಳೂರು: ಮಹದಾಯಿ ವಿಚಾರವಾಗಿ ರಾಜಕೀಯ ಪ್ರೇರಿತವಾಗಿ ಕರೆ ನೀಡಿದ್ದ ಕರ್ನಾಟಕ ಬಂದ್ ಎಂಬ ಕೃತಕ ನಾಟಕಕ್ಕೆ ರಾಜ್ಯದ ಜನ ಬೆಂಬಲ ನೀಡಿಲ್ಲ. ಇದರಿಂದ ಸರ್ಕಾರದ ಮಾತು ಕೇಳಿದ್ದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹಾಗೂ ಬಿಜೆಪಿ ಪರಿವರ್ತನಾ ರ್ಯಾಲಿ ಹಿನ್ನೆಲೆಯಲ್ಲಿ ಜನವರಿ 27ರಂದು ನಿಗದಿಯಾಗಿದ್ದ ಕರ್ನಾಟಕ ಬಂದ್ಅನ್ನು ಜನವರಿ 25ರಂದೇ ಮಾಡಲು ಸೂಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿನ್ನಡೆಯಾದಂತಾಗಿದೆ.

ರಾಜ್ಯದ ಬಹುತೇಕ ಕಡೆ ಮಹದಾಯಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಸುಗಮವಾಗಿ ಸಾಗುತ್ತಿದೆ. ಉತ್ತರ ಮಹದಾಯಿ ನದಿ ನೀರಿನ ಪ್ರಮುಖ ಫಲಾನುಭವಿಗಳಾದ ಉತ್ತರ ಕರ್ನಾಟಕದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರದಲ್ಲಂತೂ ಬಂದ್ ಬಿಸಿ ತಟ್ಟದೆ, ವ್ಯಾಪಾರ ವಹಿವಾಟು ಸುಗಮವಾಗಿ ಸಾಗುತ್ತಿದೆ. ಅಂಗಡಿಮುಂಗಟ್ಟು ತೆರೆದಿದ್ದು, ಜನ ಎಂದಿನಂತೆ ತಿರುಗಾಡುತ್ತಿದ್ದಾರೆ. ಸರ್ಕಾರದ ಮಾತು ಕೇಳಿದ ತಪ್ಪಿಗೆ ಹಲವು ಕನ್ನಡಪರ ಸಂಘಟನೆಗಳು ಮಾತ್ರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿರುವುದು ಬಿಟ್ಟರೆ ಇನ್ನಾವುದೇ ತೊಂದರೆಯಾಗಿಲ್ಲ.

ಇದು ಉತ್ತರ ಕರ್ನಾಟಕದ ಪರಿಸ್ಥಿತಿಯಾದರೆ, ಬೇರೆ ಭಾಗದಲ್ಲೂ ಪರಿಸ್ಥಿತಿ ಭಿನ್ನವಾಗೇನಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡದ ಶಿರಸಿ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೊಡಗು ಜಿಲ್ಲೆಗಳಲ್ಲೂ ಬಂದ್ ಗೆ ಅತೀ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರದ ಆಣತಿ ಮೇರೆಗೆ ಬಂದ್ ಗೆ ಕೆಎಸ್ಆರ್ಟಿಸಿ ಬೆಂಬಲ ನೀಡಿರುವುದರಿಂದ ಬೆಂಗಳೂರು ಸುತ್ತಲೂ ಬಸ್ ಸಂಚಾರ ಅಸ್ತವ್ಯಸ್ತವಾಗಿದ್ದು ಬಿಟ್ಟರೆ ಅಷ್ಟೇನೂ ಪ್ರಭಾವ ಬೀರಿಲ್ಲ.

ಒಟ್ಟಿನಲ್ಲಿ ಸರ್ಕಾರದ ರಾಜಕೀಯ ಪ್ರೇರಿತ ಮಾತು ಕೇಳಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ ರಾಜ್ಯದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search