• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಣರಾಜ್ಯೋತ್ಸವ ಹಿನ್ನೆಲೆ ಹಿಮಾಲಯ ತುದಿಯಲ್ಲಿ ಶಿಸ್ತಿನ ನಡಿಗೆ ಮೂಲಕ ದೇಶಪ್ರೇಮ ಮೆರೆದ ಸೈನಿಕರು!

TNN Correspondent Posted On January 26, 2018


  • Share On Facebook
  • Tweet It

ದೆಹಲಿ: ಒಂದೆಡೆ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ ಮುಖಂಡರನ್ನು ಕರೆಸಿ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿಯಾದರೆ, ಮತ್ತೊಂದೆಡೆ ಹಿಮಾಲಯದ ತುದಿಯಲ್ಲಿ ಭಾರತೀಯ ಸೈನಿಕರು ಶಿಸ್ತಿನ ನಡಿಗೆ ಪ್ರದರ್ಶಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತಂದಿದ್ದಲ್ಲದೆ, ಅಪಾರ ದೇಶಪ್ರೇಮ ಮೆರೆದಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆ 18 ಸಾವಿರ ಅಡಿ ಎತ್ತರದ ಹಾಗೂ ಮೈನಸ್ 18 ಡಿಗ್ರಿ ಸೆಲ್ಶಿಯಸ್ ಇರುವ ಹಿಮಾಲಯದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಿಡಿದು ಮಾರ್ಚ್ ಕೈಗೊಳ್ಳುವ ಮೂಲಕ ಅಪ್ರತಿಮ ದೇಶ ಪ್ರೇಮ ತೋರಿದ್ದಾರೆ.

ಮೈ ಜುಂ ಎನಿಸುವ ಚಳಿ, ಮೈನಸ್ 18 ಡಿಗ್ರಿಯ ವಾತಾವರಣ, ಸುತ್ತಲೂ ಮಂಜುಗಡ್ಡೆಯಿಂದ ಕೂಡಿರುವ ಪ್ರದೇಶಕ್ಕೆ ತೆರಳಿ ಮಾರ್ಚ್ ಮಾಡಿದ್ದು ಸೇನೆಯ ದಿಟ್ಟತನ ತೋರಿಸಿದ್ದಲ್ಲದೆ ಭಾರತೀಯ ಸೈನಿಕರು ಎಂಥ ಪರಿಸ್ಥಿತಿಯಲ್ಲೂ ದೇಶಪ್ರೇಮ ಮೆರೆಯುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಅಲ್ಲದೆ ದೇಶಾದ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ದೆಹಲಿಯಲ್ಲಂತೂ ಹಬ್ಬದ ವಾತಾವರಣವಿದೆ. ಇದೇ ಮೊದಲ ಬಾರಿಗೆ ಆಸಿಯಾನ್ ದೇಶಗಳ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಐತಿಹಾಸಿಕ ಹಾಗೂ ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸುವ ನಿಟ್ಟಿನಲ್ಲಿ ಮೋದಿ ಅವರು ವೇದಿಕೆ ಸೃಷ್ಟಿಸಿದ್ದಾರೆ.

 

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search