• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವ ಹಿನ್ನೆಲೆ ಹಿಮಾಲಯ ತುದಿಯಲ್ಲಿ ಶಿಸ್ತಿನ ನಡಿಗೆ ಮೂಲಕ ದೇಶಪ್ರೇಮ ಮೆರೆದ ಸೈನಿಕರು!

TNN Correspondent Posted On January 26, 2018
0


0
Shares
  • Share On Facebook
  • Tweet It

ದೆಹಲಿ: ಒಂದೆಡೆ ಗಣರಾಜ್ಯೋತ್ಸವಕ್ಕೆ ಆಸಿಯಾನ್ ದೇಶಗಳ ಮುಖಂಡರನ್ನು ಕರೆಸಿ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿಯಾದರೆ, ಮತ್ತೊಂದೆಡೆ ಹಿಮಾಲಯದ ತುದಿಯಲ್ಲಿ ಭಾರತೀಯ ಸೈನಿಕರು ಶಿಸ್ತಿನ ನಡಿಗೆ ಪ್ರದರ್ಶಿಸುವ ಮೂಲಕ ಗಣರಾಜ್ಯೋತ್ಸವಕ್ಕೆ ಮೆರುಗು ತಂದಿದ್ದಲ್ಲದೆ, ಅಪಾರ ದೇಶಪ್ರೇಮ ಮೆರೆದಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆ 18 ಸಾವಿರ ಅಡಿ ಎತ್ತರದ ಹಾಗೂ ಮೈನಸ್ 18 ಡಿಗ್ರಿ ಸೆಲ್ಶಿಯಸ್ ಇರುವ ಹಿಮಾಲಯದ ಪ್ರದೇಶದಲ್ಲಿ ತ್ರಿವರ್ಣ ಧ್ವಜ ಹಿಡಿದು ಮಾರ್ಚ್ ಕೈಗೊಳ್ಳುವ ಮೂಲಕ ಅಪ್ರತಿಮ ದೇಶ ಪ್ರೇಮ ತೋರಿದ್ದಾರೆ.

ಮೈ ಜುಂ ಎನಿಸುವ ಚಳಿ, ಮೈನಸ್ 18 ಡಿಗ್ರಿಯ ವಾತಾವರಣ, ಸುತ್ತಲೂ ಮಂಜುಗಡ್ಡೆಯಿಂದ ಕೂಡಿರುವ ಪ್ರದೇಶಕ್ಕೆ ತೆರಳಿ ಮಾರ್ಚ್ ಮಾಡಿದ್ದು ಸೇನೆಯ ದಿಟ್ಟತನ ತೋರಿಸಿದ್ದಲ್ಲದೆ ಭಾರತೀಯ ಸೈನಿಕರು ಎಂಥ ಪರಿಸ್ಥಿತಿಯಲ್ಲೂ ದೇಶಪ್ರೇಮ ಮೆರೆಯುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಅಲ್ಲದೆ ದೇಶಾದ್ಯಂತ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ದೆಹಲಿಯಲ್ಲಂತೂ ಹಬ್ಬದ ವಾತಾವರಣವಿದೆ. ಇದೇ ಮೊದಲ ಬಾರಿಗೆ ಆಸಿಯಾನ್ ದೇಶಗಳ ನಾಯಕರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಐತಿಹಾಸಿಕ ಹಾಗೂ ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸುವ ನಿಟ್ಟಿನಲ್ಲಿ ಮೋದಿ ಅವರು ವೇದಿಕೆ ಸೃಷ್ಟಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search