• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನಡೆಯಲಿಲ್ಲ ಕಮ್ಯುನಿಸ್ಟ್ ಸರ್ಕಾರದ ಸರ್ವಾಧಿಕಾರ, ಮೋಹನ್ ಭಾಗವತ್ ಕೇರಳದಲ್ಲಿ ಧ್ವಜಾರೋಹಣ!

TNN Correspondent Posted On January 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಕಳೆದ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮುಖಂಡ ಮೋಹನ್ ಭಾಗವತ್ ಅವರು ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸಿಪಿಎಂ ಸರ್ಕಾರಕ್ಕೆ ಈ ಬಾರಿಯೂ ಮೋಹನ್ ಭಾಗವತ್ ಸವಾಲೊಡ್ಡಿದ್ದು, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡಿದ್ದಾರೆ.

ಕೇರಳದ ಪಲಕ್ಕಾಡ್ ಎಂಬಲ್ಲಿನ ಕರ್ಣಕೈಯಮ್ ಹೈಯರ್ ಸೆಕಂಡರಿ ಶಾಲೆಯಲ್ಲಿ ಮೋಹನ್ ಭಾಗವತ್ ಬೆಳಗ್ಗೆ ಧ್ವಜಾರೋಹಣ ಮಾಡಿದ್ದು, ಕೊನೆಗೂ ಹೇಳಿದಂತೆಯೇ ನಡೆದುಕೊಂಡಿದ್ದಾರೆ.

ಕಳೆದ ಬಾರಿಯೂ ಮೋಹನ್ ಭಾಗವತ್ ಗಣರಾಜ್ಯೋತ್ಸವದಂದು ಶಾಲೆಯೊಂದರಲ್ಲಿ ಭಾರತದ ಧ್ವಜಾರೋಹಣ ಮಾಡಿದ್ದಕ್ಕೆ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ ಭಾರತೀಯನಾಗಿ ಭಾರತದ ಧ್ವಜಾರೋಹಣ ಮಾಡುವುದರಲ್ಲಿ ತಪ್ಪೇನು ಎಂದು ಮೋಹನ್ ಭಾಗವತ್ ತಿರುಗೇಟು ನೀಡಿದ್ದರು.

ಈ ಬಾರಿಯೂ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಆಡಳಿತ ಮಂಡಳಿ ಅಥವಾ ಸಿಬ್ಬಮದಿ ಮಾತ್ರ ಧ್ವಜಾರೋಹಣ ಮಾಡಬೇಕು ಎಂದು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ ಮೋಹನ್ ಭಾಗವತ್ ಅವರು ಭಾರತದ ಧ್ವಜಾರೋಹಣ ಮಾಡಿದ್ದಾರೆ.

ಹಾಗಾದರೆ ಧ್ವಜಾರೋಹಣ ಮಾಡುವುದು ತಪ್ಪಾ?

ಇಂದು ದೇಶದ ಹಲವು ರಾಜ್ಯಗಳ ಹಳ್ಳಿಗಳಲ್ಲಿ ಊರಿನ ಗಣ್ಯರು, ಶಾಲೆಗೆ ಭೂಮಿ ನೀಡಿದವರು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡುವ ಸಂಪ್ರದಾಯವಿದೆ. ಅಷ್ಟಕ್ಕೂ ಸರ್ಕಾರಿ ಸಿಬ್ಬಂದಿಯೇ ಧ್ವಜಾರೋಹಣ ಮಾಡಬೇಕು ಎಂಬ ನಿಯಮವಿಲ್ಲ. ಹೀಗಿರುವಾಗ ಸರ್ವಾಧಿಕಾರಿ ಮನೋಭಾವನೆಯ ಸಿಪಿಎಂ ಸರ್ಕಾರ ಮೋಹನ್ ಭಾಗವತ್ ಅವರಿಗೆ ಭಾರತದ ಧ್ವಜ ಹಾರಿಸುವುದನ್ನು ತಪ್ಪಿಸಲು ಇಲ್ಲಸಲ್ಲದ ಅಧಿಸೂಚನೆ ಹೊರಡಿಸಿದೆ. ಹೇಳಿ ಭಾರತದ ಪ್ರಜೆಯಾಗಿ, ಭಾರತದ ಧ್ವಜ ಹಾರಿಸುವುದು ತಪ್ಪಾ?

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search