• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಡೆಯಲಿಲ್ಲ ಕಮ್ಯುನಿಸ್ಟ್ ಸರ್ಕಾರದ ಸರ್ವಾಧಿಕಾರ, ಮೋಹನ್ ಭಾಗವತ್ ಕೇರಳದಲ್ಲಿ ಧ್ವಜಾರೋಹಣ!

TNN Correspondent Posted On January 26, 2018


  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಕಳೆದ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮುಖಂಡ ಮೋಹನ್ ಭಾಗವತ್ ಅವರು ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸಿಪಿಎಂ ಸರ್ಕಾರಕ್ಕೆ ಈ ಬಾರಿಯೂ ಮೋಹನ್ ಭಾಗವತ್ ಸವಾಲೊಡ್ಡಿದ್ದು, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡಿದ್ದಾರೆ.

ಕೇರಳದ ಪಲಕ್ಕಾಡ್ ಎಂಬಲ್ಲಿನ ಕರ್ಣಕೈಯಮ್ ಹೈಯರ್ ಸೆಕಂಡರಿ ಶಾಲೆಯಲ್ಲಿ ಮೋಹನ್ ಭಾಗವತ್ ಬೆಳಗ್ಗೆ ಧ್ವಜಾರೋಹಣ ಮಾಡಿದ್ದು, ಕೊನೆಗೂ ಹೇಳಿದಂತೆಯೇ ನಡೆದುಕೊಂಡಿದ್ದಾರೆ.

ಕಳೆದ ಬಾರಿಯೂ ಮೋಹನ್ ಭಾಗವತ್ ಗಣರಾಜ್ಯೋತ್ಸವದಂದು ಶಾಲೆಯೊಂದರಲ್ಲಿ ಭಾರತದ ಧ್ವಜಾರೋಹಣ ಮಾಡಿದ್ದಕ್ಕೆ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ ಭಾರತೀಯನಾಗಿ ಭಾರತದ ಧ್ವಜಾರೋಹಣ ಮಾಡುವುದರಲ್ಲಿ ತಪ್ಪೇನು ಎಂದು ಮೋಹನ್ ಭಾಗವತ್ ತಿರುಗೇಟು ನೀಡಿದ್ದರು.

ಈ ಬಾರಿಯೂ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಆಡಳಿತ ಮಂಡಳಿ ಅಥವಾ ಸಿಬ್ಬಮದಿ ಮಾತ್ರ ಧ್ವಜಾರೋಹಣ ಮಾಡಬೇಕು ಎಂದು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ ಮೋಹನ್ ಭಾಗವತ್ ಅವರು ಭಾರತದ ಧ್ವಜಾರೋಹಣ ಮಾಡಿದ್ದಾರೆ.

ಹಾಗಾದರೆ ಧ್ವಜಾರೋಹಣ ಮಾಡುವುದು ತಪ್ಪಾ?

ಇಂದು ದೇಶದ ಹಲವು ರಾಜ್ಯಗಳ ಹಳ್ಳಿಗಳಲ್ಲಿ ಊರಿನ ಗಣ್ಯರು, ಶಾಲೆಗೆ ಭೂಮಿ ನೀಡಿದವರು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡುವ ಸಂಪ್ರದಾಯವಿದೆ. ಅಷ್ಟಕ್ಕೂ ಸರ್ಕಾರಿ ಸಿಬ್ಬಂದಿಯೇ ಧ್ವಜಾರೋಹಣ ಮಾಡಬೇಕು ಎಂಬ ನಿಯಮವಿಲ್ಲ. ಹೀಗಿರುವಾಗ ಸರ್ವಾಧಿಕಾರಿ ಮನೋಭಾವನೆಯ ಸಿಪಿಎಂ ಸರ್ಕಾರ ಮೋಹನ್ ಭಾಗವತ್ ಅವರಿಗೆ ಭಾರತದ ಧ್ವಜ ಹಾರಿಸುವುದನ್ನು ತಪ್ಪಿಸಲು ಇಲ್ಲಸಲ್ಲದ ಅಧಿಸೂಚನೆ ಹೊರಡಿಸಿದೆ. ಹೇಳಿ ಭಾರತದ ಪ್ರಜೆಯಾಗಿ, ಭಾರತದ ಧ್ವಜ ಹಾರಿಸುವುದು ತಪ್ಪಾ?

 

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search