• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ನಡೆಯಲಿಲ್ಲ ಕಮ್ಯುನಿಸ್ಟ್ ಸರ್ಕಾರದ ಸರ್ವಾಧಿಕಾರ, ಮೋಹನ್ ಭಾಗವತ್ ಕೇರಳದಲ್ಲಿ ಧ್ವಜಾರೋಹಣ!

TNN Correspondent Posted On January 26, 2018
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಕಳೆದ ಬಾರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮುಖಂಡ ಮೋಹನ್ ಭಾಗವತ್ ಅವರು ಧ್ವಜಾರೋಹಣ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸಿಪಿಎಂ ಸರ್ಕಾರಕ್ಕೆ ಈ ಬಾರಿಯೂ ಮೋಹನ್ ಭಾಗವತ್ ಸವಾಲೊಡ್ಡಿದ್ದು, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶಾಲೆಯೊಂದರಲ್ಲಿ ಧ್ವಜಾರೋಹಣ ಮಾಡಿದ್ದಾರೆ.

ಕೇರಳದ ಪಲಕ್ಕಾಡ್ ಎಂಬಲ್ಲಿನ ಕರ್ಣಕೈಯಮ್ ಹೈಯರ್ ಸೆಕಂಡರಿ ಶಾಲೆಯಲ್ಲಿ ಮೋಹನ್ ಭಾಗವತ್ ಬೆಳಗ್ಗೆ ಧ್ವಜಾರೋಹಣ ಮಾಡಿದ್ದು, ಕೊನೆಗೂ ಹೇಳಿದಂತೆಯೇ ನಡೆದುಕೊಂಡಿದ್ದಾರೆ.

ಕಳೆದ ಬಾರಿಯೂ ಮೋಹನ್ ಭಾಗವತ್ ಗಣರಾಜ್ಯೋತ್ಸವದಂದು ಶಾಲೆಯೊಂದರಲ್ಲಿ ಭಾರತದ ಧ್ವಜಾರೋಹಣ ಮಾಡಿದ್ದಕ್ಕೆ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ ಭಾರತೀಯನಾಗಿ ಭಾರತದ ಧ್ವಜಾರೋಹಣ ಮಾಡುವುದರಲ್ಲಿ ತಪ್ಪೇನು ಎಂದು ಮೋಹನ್ ಭಾಗವತ್ ತಿರುಗೇಟು ನೀಡಿದ್ದರು.

ಈ ಬಾರಿಯೂ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಆಡಳಿತ ಮಂಡಳಿ ಅಥವಾ ಸಿಬ್ಬಮದಿ ಮಾತ್ರ ಧ್ವಜಾರೋಹಣ ಮಾಡಬೇಕು ಎಂದು ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ ಮೋಹನ್ ಭಾಗವತ್ ಅವರು ಭಾರತದ ಧ್ವಜಾರೋಹಣ ಮಾಡಿದ್ದಾರೆ.

ಹಾಗಾದರೆ ಧ್ವಜಾರೋಹಣ ಮಾಡುವುದು ತಪ್ಪಾ?

ಇಂದು ದೇಶದ ಹಲವು ರಾಜ್ಯಗಳ ಹಳ್ಳಿಗಳಲ್ಲಿ ಊರಿನ ಗಣ್ಯರು, ಶಾಲೆಗೆ ಭೂಮಿ ನೀಡಿದವರು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡುವ ಸಂಪ್ರದಾಯವಿದೆ. ಅಷ್ಟಕ್ಕೂ ಸರ್ಕಾರಿ ಸಿಬ್ಬಂದಿಯೇ ಧ್ವಜಾರೋಹಣ ಮಾಡಬೇಕು ಎಂಬ ನಿಯಮವಿಲ್ಲ. ಹೀಗಿರುವಾಗ ಸರ್ವಾಧಿಕಾರಿ ಮನೋಭಾವನೆಯ ಸಿಪಿಎಂ ಸರ್ಕಾರ ಮೋಹನ್ ಭಾಗವತ್ ಅವರಿಗೆ ಭಾರತದ ಧ್ವಜ ಹಾರಿಸುವುದನ್ನು ತಪ್ಪಿಸಲು ಇಲ್ಲಸಲ್ಲದ ಅಧಿಸೂಚನೆ ಹೊರಡಿಸಿದೆ. ಹೇಳಿ ಭಾರತದ ಪ್ರಜೆಯಾಗಿ, ಭಾರತದ ಧ್ವಜ ಹಾರಿಸುವುದು ತಪ್ಪಾ?

 

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search