• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಪಸಂಖ್ಯಾತರ ಓಲೈಕೆಗೆ ಮುಂದಾದ ಕಾಂಗ್ರೆಸ್, ಮುಸ್ಲಿಮರ ಮೇಲಿನ ಪ್ರಕರಣ ವಾಪಸ್ ಗೆ ಚಿಂತನೆ

TNN Correspondent Posted On January 26, 2018
0


0
Shares
  • Share On Facebook
  • Tweet It

ಬೆಂಗಳೂರು: ಮಹದಾಯಿ ಹೋರಾಟದಲ್ಲಿ ರೈತರು ಹಾಗೂ ದಕ್ಷಿಣ ಕನ್ನಡ ಸೇರಿ ಹಲವೆಡೆ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮೇಲೆ ಕೇಸ್ ದಾಖಲಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಈಗ ಚುನಾವಣೆ ಬರುತ್ತಲೇ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ.

ಹೌದು, ರೈತರು ಹಾಗೂ ಹಿಂದೂಗಳ ವಿರುದ್ಧ ಹಲವು ಪ್ರಕರಣ ದಾಖಲಾಗಿದ್ದರೂ, ಕೇವಲ ಮುಸ್ಲಿಮರ ವಿರುದ್ಧ ದಾಖಲಿಸಿದ್ದು ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮತಕ್ಕಾಗಿ ಮುಸ್ಲಿಮರ ಓಲೈಕೆಗೆ ಪ್ರಯತ್ನಿಸುತ್ತಿದೆ.

ಹಲವು ಗಲಭೆ, ಗಲಾಟೆಗಳಲ್ಲಿ 2013 ರಿಂದ 2017ರವರೆಗೆ ಮುಸ್ಲಿಮರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಲು ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ. ಅಲ್ಲದೆ, ರಾಜ್ಯದ 22 ಜಿಲ್ಲೆಗಳ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳ ಅಭಿಪ್ರಾಯ ಕೇಳಿದೆ.

ಸರ್ಕಾರದ ಈ ನಡೆಯನ್ನು ಸಚಿವರಾದ ಎಚ್.ಆಂಜನೇಯ ಹಾಗೂ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದು, ಕಾವೇರಿ, ಮಹದಾಯಿ ಹಾಗೂ ಟಿಪ್ಪು ಜಯಂತಿ ವೇಳೆ ಮುಸ್ಲಿಮರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಲು ನಿರ್ಧರಿಸಿದ್ದು ಸರಿಯಾಗಿಯೇ ಇದೆ ಎಂದಿದ್ದಾರೆ.

ಆದರೆ ಈ ಎಲ್ಲ ಗಲಾಟೆಗಳಲ್ಲಿ ಹಿಂದೂಗಳ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವುಗಳನ್ನು ಹಿಂಪಡೆಯಲು ಸರ್ಕಾರಕ್ಕೆ ಯಾವ ಅಳುಕಿದೆಯೋ? ಗೊತ್ತಿಲ್ಲ. ಒಟ್ಟಿನಲ್ಲಿ ಚುನಾವಣೆ ವೇಳೆ ಒಂದು ಸಮುದಾಯದ ಮತ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೀಗೆ ಮಾಡಿರುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search