• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುರತ್ಕಲ್ ಎನ್ಐಟಿಕೆ ಕಡಲ ನಡುವಿನ ದಿಬ್ಬ ಸಾವಿಗೆ ಕರೆದೊಯ್ಯುತ್ತದೆ!

TNN Correspondent Posted On July 13, 2017
0


0
Shares
  • Share On Facebook
  • Tweet It

ಸುರತ್ಕಲ್ ಎನ್ ಐಟಿಕೆ ಕಡಲ ತೀರ ಪ್ರವಾಸಿಗರಿಗೆ ಯಾವತ್ತೂ ತನ್ನ ಸೌಂದರ್ಯದಿಂದ ಸೆಳೆಯುವುದು ನಮಗೆಲ್ಲಾ ಗೊತ್ತೇ ಇದೆ. ಅಲ್ಲಿ ಸಿಗುವ ಏಕಾಂತ ಮತ್ತು ಜನಜಂಗುಳಿ ಕಡಿಮೆ ಇರುವ ವಾತಾವರಣ ಯಾವತ್ತಿಗೂ ಮನಸ್ಸಿಗೆ ಮುದ ನೀಡುತ್ತದೆ. ಅದಕ್ಕಾಗಿ ಹೆಚ್ಚಾಗಿ ಯುವಕ, ಯುವತಿಯರು ಅಲ್ಲಿ ಬರುತ್ತಾರೆ. ಅದರಲ್ಲಿಯೂ ಸ್ಥಳೀಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳು ಕೂಡ ಅಲ್ಲಿಗೆ ಅಪರೂಪಕ್ಕೊಮ್ಮೆ ಬರುತ್ತಾರೆ. ಹಾಗೆ ಬರುವವರು ಸ್ವಲ್ಪ ಎಚ್ಚರ ತಪ್ಪಿದರೂ ಸಾವಿನೊಂದಿಗೆ ಸಂಬಂಧ ಹೊಂದುವುದು ಗ್ಯಾರಂಟಿ.

ಇತ್ತೀಚೆಗೆ ಬೆಂಗಳೂರಿನ ಕೆಆರ್ ಪುರಂನಿಂದ ಪ್ರವಾಸಕ್ಕೆಂದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದ ಯುವಕರ ಗುಂಪು ಸುರತ್ಕಲ್ ಕಡಲ ಕಿನಾರೆಯಲ್ಲಿ ದುರಂತಕ್ಕೆ ಸಿಲುಕಿ ಗೃಹರಕ್ಷಕ ದಳದ ಮುಳುಗುತಜ್ಞರ ಸಹಕಾರದಿಂದ ಬದುಕಿ ಉಳಿದ ಘಟನೆ ವರದಿಯಾಗಿದೆ. ಏಳು ಜನ ಪ್ರವಾಸಿಗರಿದ್ದ ತಂಡದಲ್ಲಿ ಐದು ಜನ ಸೋಮವಾರ ಎನ್ ಐಟಿಕೆ ಕಡಲ ಕಿನಾರೆಯ ದಡದಲ್ಲಿ ನಿಂತಿದ್ದರೆ ಇಬ್ಬರು ನೀರಿಗೆ ಇಳಿದಿದ್ದರು. ಆ ಇಬ್ಬರು ಅಲ್ಲಿಯೇ ನೀರಿನ ನಡುವೆ ಇರುವೆ ದಿಬ್ಬವನ್ನು ಏರಿ ಸೆಲ್ಫಿ ತೆಗೆಯುತ್ತಾ ಎಂಜಾಯ್ ಮಾಡುತ್ತಿದ್ದರು. ಅದೇ ಸಮಯಕ್ಕೆ ಸಮುದ್ರದಲ್ಲಿ ನೀರಿನ ಅಬ್ಬರ ಜಾಸ್ತಿಯಾಗುತ್ತಾ ಬಂತು. ಅದರಿಂದ ದಿಬ್ಬ ನೀರಲ್ಲಿ ಮುಳುಗುವ ಸನ್ನಿವೇಶ ನಿರ್ಮಾಣವಾಗಿತ್ತು. ಒಂದಿಷ್ಟು ನೀರಿನ ಪ್ರಮಾಣ ಹೆಚ್ಚಾದಲ್ಲಿ ಇಬ್ಬರು ಕೂಡ ನೀರಿನ ರಭಸಕ್ಕೆ ಸಮುದ್ರದಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಸೃಷ್ಟಿಯಾಗಿತ್ತು. ಅಂತಹ ಹೊತ್ತಿನಲ್ಲಿ ಇಬ್ಬರಲ್ಲಿ ಒಬ್ಬ ಯುವಕ ನೀರಿನ ರಭಸ ಕಡಿಮೆಯಾದ ತಕ್ಷಣ ಈಜಿ ದಡ ಸೇರಿದರೆ, ಮತ್ತೊಬ್ಬ ಯುವಕ ದಿಣ್ಣೆಯ ಮೇಲೆಯೇ ನಿಂತು ರಕ್ಷಣೆಗಾಗಿ ಮೊರೆಯಿಡುತ್ತಿದ್ದ. ಸಸಿಹಿತ್ಲುವಿನಲ್ಲಿ ನಡೆದ ದುರ್ಘಟನೆಯಲ್ಲಿ ಕಣ್ಮರೆಯಾಗಿರುವ ಮೂರು ಜನರ ಹೆಣಗಳನ್ನು ಹುಡುಕುವ ಕೆಲಸದಲ್ಲಿ ನಿರತರಾಗಿದ್ದ ಮುಲ್ಕಿ ಗೃಹ ರಕ್ಷಕ ದಳದ ಏಳು ಜನರ ತಂಡ ಹಿಂತಿರುಗುವಾಗ ಈ ಯುವಕ ಜೀವರಕ್ಷಣೆಗಾಗಿ ಕೂಗು ಹಾಕುವುದು ಅವರ ಗಮನಕ್ಕೆ ಬಂದಿದೆ. ಇದರಿಂದ ತಕ್ಷಣ ಜಾಗೃತರಾದ ತಂಡದ ಯುವಕರು ಹಗ್ಗದ ಸಹಾಯದಿಂದ ಯುವಕನನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ರಕ್ಷಿಸಲ್ಪಟ್ಟ ಯುವಕನನ್ನು ಭರತ್ ಎಂದು ಗುರುತಿಸಲಾಗಿದೆ.

ಕಾರ್ಯಾಚರಣೆ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಂಗಳೂರು ತಹಶೀಲ್ದಾರ್ ಮಹದೇವಪ್ಪ ಅವರು ಗೃಹ ರಕ್ಷಕ ದಳದ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಒಂದು ಜೀವ ಉಳಿಯಲು ಸಾಧ್ಯವಾಯಿತು. ಇಲ್ಲದೆ ಹೋದರೆ ಸಸಿಹಿತ್ಲುವಿನಲ್ಲಿ ಆದ ದುರ್ಘಟನೆ ಮರುಕಳಿಸುತ್ತಿತ್ತು ಎಂದರು. ಮಳೆಗಾಲದ ಸಂದರ್ಭದಲ್ಲಿ ಸಮುದ್ರದಲ್ಲಿ ಅಲೆಯ ಅಬ್ಬರ ಜೋರಾಗಿರುತ್ತವೆ ಎಂದು ಹೇಳಿದ ಅವರು, ಯಾವುದೇ ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ. ಒಟ್ಟು ನಲ್ವತ್ತು ತಂಡಗಳು ಇದಕ್ಕಾಗಿ ರಚಿಸಲಾಗಿದೆ. ಮಳೆಯ ವಿಕೋಪದಿಂದ ಯಾವುದಾದರೂ ಶಾಲೆಗೆ ಸಮಸ್ಯೆಯಾದರೆ ಶಾಲಾ ಆಡಳಿತ ಮಂಡಳಿಗೆ ರಜೆ ಕೊಡುವ ಅಧಿಕಾರವನ್ನು ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ನೀಡಿದೆ ಎಂದರು.

ಸಮುದ್ರ ತೀರದಲ್ಲಿ ಅಪಾಯಕಾರಿ ಜಾಗ ಎಂದು ಬೋರ್ಡರ್ ಹಾಕಿದ್ದರೂ ಪರವೂರಿನಿಂದ ಬರುವ ಪ್ರವಾಸಿಗರಿಗೆ ಇದರ ಪ್ರಾಮುಖ್ಯತೆ ಗೊತ್ತಿರುವುದಿಲ್ಲ. ಆದ್ದರಿಂದ ಇಂತಹ ಸಂದರ್ಭದಲ್ಲಿ ನೀರಿನ ಆಳಕ್ಕೆ ಇಳಿಯುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ ಎಂದು ಮಹದೇವಪ್ಪ ತಿಳಿಸಿದರು.

 

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search