• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಗೆ ಮೋದಿಯೇ ಮೊದಲ ಟಾರ್ಗೆಟ್

TNN Correspondent Posted On January 26, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ವಿಶ್ವದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪ್ರಭಾವ ಬೀರಿ, ಭಯೋತ್ಪಾದನೆ ವಿರುದ್ಧ ರಣಘೋಷಣೆ ಮೊಳಗಿಸಿದ್ದು, ಭಯೋತ್ಪಾದಕ ಸಂಘಟನೆಗಳ ನೀರಿಳಿಸಿದೆ. ಅದಕ್ಕಾಗಿ ಇದೀಗ ನಮ್ಮ ಮೊದಲ ಶತ್ರು, ವಿರೋಧಿ ಪ್ರಧಾನಿ ನರೇಂದ್ರ ಮೋದಿ ಎಂದು ಪಾಕಿಸ್ತನದ ಮುಸ್ಲಿಂ ಮೂಲಭೂತವಾದಿ, ಭಯೋತ್ಪಾದಕ ಸಂಘಟನೆ ಜೈಷ್ ಎ ಮಹಮ್ಮದ್ ನ ಮುಖಂಡ ಮೌಲಾನ ತಲ್ಹಾ ಸೌಫ್ ಬಹಿರಂಗ ಸಮಾವೇಶದಲ್ಲಿ ಬೆದರಿಕೆ ಒಡ್ಡಿದ್ದಾನೆ.

ಇತ್ತೀಚೆಗೆ ಸಿಂದ್ ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೈಷ್ ಎ ಮಹಮ್ಮದ್ ಸ್ಥಾಪಕ ಉಗ್ರ ಮೌಲಾನ್ ಮಸೂದ್ ಅಜರ್ ನ ಸಹೋದರ ಈ ಘೋಷಣೆ ಮಾಡಿದ್ದಾನೆ. ಭಾರತ ಜೈಷ್ ಎ ಮಹಮ್ಮದ್ ಸಂಘಟನೆಯ ಮೊದಲ ವಿರೋಧಿ, ಅದರ ಪ್ರಧಾನಿಯೇ ನಮ್ಮ ಟಾರ್ಗೆಟ್ ಎಂದು ನಾಲಿಗೆ ಹರಿಬಿಟ್ಟಿದ್ದಾನೆ.

ಮುಸ್ಲಿಂ ಮಹತ್ತರವಾದ ಗುರಿಯೊಂದನ್ನು ಮುಟ್ಟಲು ಜಿಹಾದ್ ನ್ನು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು. ಇಲ್ಲದಿದ್ದರೇ ತೀವ್ರ ಸಮಸ್ಯೆ ಎದುರಾಗಲಿದೆ. ಭಾರತ ಮಿನಿ ಸೂಪರ್ ಪವರ್ ಇದ್ದಂತೆ. ಇದು ಪಾಕಿಸ್ತಾನದ ವಿರುದ್ಧ 60 ವರ್ಷಗಳಿಂದ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ನಾವು ಶೀಘ್ರದಲ್ಲಿ ಕಾಶ್ಮೀರ ಕಣಿವೆಯಲ್ಲಿ ಜಯ ಸಾಧಿಸಲಿದ್ದೇವೆ ಎಂಬ ದರ್ಪದ ಮಾತುಗಳನ್ನು ಆಡಿದ್ದಾನೆ.

ನಮ್ಮ ತಾಯಿ ಮತ್ತು ಸಹೋದರಿಯರು ನಮ್ಮಗೆ ಆಹ್ವಾನಿಸುತ್ತಿದ್ದಾರೆ. ನಮ್ಮನ್ನು ಈ ಬಂಧನದಿಂದ ಮುಕ್ತಿ ನೀಡಿ ಎಂದು. ನಮ್ಮ ಸಂಘಟನೆ ಆ ಕೆಲಸವನ್ನು ಮಾಡಲು ಶಕ್ತವಾಗಿದ್ದು, ಗಡಿ ದಾಟಿ ಒಳನುಗ್ಗುವಲ್ಲಿ ಯಶಸ್ವಿಯಾಗಿದ್ದೇವೆ. ಬಾಬ್ರಿ ಮಸೀದಿ ಸ್ಥಳದಲ್ಲಿ ಭಾರತದ ಸರ್ಕಾರ ರಾಮ ಮಂದಿರ ಕಟ್ಟಲು ಪ್ರಯತ್ನಿಸುತ್ತಿದೆ. ಅದಕ್ಕೆ ನಾವು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾನೆ.

ಮೌಲಾನ್ ತೌಸಿಫ್ ನಂತ ಉಗ್ರರು ಈ ರೀತಿ ಬಹಿರಂಗವಾಗಿ ಮಾತನಾಡಿದರೂ ಪಾಕಿಸ್ತಾನ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳುವ ಮೂಲಕ ಭಯೋತ್ಪಾದನೆ ಪರೋಕ್ಷವಾಗಿ ಪ್ರೇರಣೆ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search