• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಸಿಯಾನ್ ಮುಖಂಡರ ಭೇಟಿ ಕುರಿತು ಮೋದಿ ಬರೆದ ಆ ಜನಪ್ರಿಯ ಲೇಖನದಲ್ಲಿ ಏನಿದೆ ಗೊತ್ತಾ?

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಗಣರಾಜ್ಯೋತ್ಸವಕ್ಕೆ ಆಸಿಯಾನ್ ರಾಷ್ಟ್ರಗಳ ಮುಖಂಡರು ಆಗಮಿಸುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬರೆದ ಅಗ್ರ ಲೇಖನ ದೇಶದ 27 ಪತ್ರಿಕೆಗಳಲ್ಲಿ 10 ಭಾಷೆಗಳಲ್ಲಿ ಪ್ರಕಟವಾಗಿದ್ದು, ಅಪಾರ ಜನಪ್ರಿಯತೆ ಗಳಿಸಿದೆ.

ಆಸಿಯಾನ್ ರಾಷ್ಟ್ರಗಳಾದ ಥೈಲ್ಯಾಂಡ್, ವಿಯೇಂಟ್ನಾಂ, ಇಂಡೋನೇಷ್ಯಾ, ಫಿಲಿಪ್ಪೈನ್ಸ್, ಸಿಂಗಾಪುರ, ಮ್ಯಾನ್ಮಾರ್, ಕೊಲಂಬಿಯಾ, ಲಾವೋಸ್ ಮತ್ತು ಬ್ರುನೈ ರಾಷ್ಟ್ರಗಳ ಮುಖಂಡರು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿರುವುದು ಭಾರತದ ಪಾಲಿಗೆ “ಐತಿಹಾಸಿಕ ಕ್ಷಣ” ಎಂದು ಪ್ರಧಾನಿ ಮೋದಿ ತಮ್ಮ ಲೇಖನದಲ್ಲಿ ಬಣ್ಣಿಸಿದ್ದಾರೆ.

ಭಾರತ ಆಸಿಯಾನ್ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿದೆ. ಆಸಿಯಾನ್ ನ ಎಲ್ಲ ರಾಷ್ಟ್ರಗಳು ಸ್ಪರ್ಧೆಗಳು ಹಾಗೂ ಹಕ್ಕುಗಳನ್ನೂ ಮೀರಿ, ಒಂದು ಸೌಹಾರ್ದಯುತವಾದ ಸ್ನೇಹ ಗಳಿಸಿವೆ. ಭಾರತ ಅದನ್ನು ಎಂದಿಗೂ ಕಾಪಿಟ್ಟುಕೊಳ್ಳುತ್ತದೆ ಎಂದು ಮೋದಿ ಬರೆದಿದ್ದಾರೆ.

ಬರೀ ಸ್ನೇಹವೊಂದೇ ಅಲ್ಲ ಆಸಿಯಾನ್ ನ ಎಲ್ಲ ರಾಷ್ಟ್ರಗಳ ಗುರಿಯೂ ಒಂದೇ ಆಗಿದೆ. ನಾವೆಲ್ಲರೂ ರಾಷ್ಟ್ರಗಳಾಗಿ ಬದ್ಧತೆ ಹಾಗೂ ಸಮಗ್ರತೆಯ ಆಧಾರದ ಮೇಲೆ ದೇಶ ಕಟ್ಟುವ ಗುರಿ ಹೊಂದಿದ್ದೇವೆ. ಯಾವುದೇ ರಾಷ್ಟ್ರಗಳ ಗಾತ್ರ, ಜನಸಂಖ್ಯೆಯನ್ನು ಅಳೆಯದೆ, ಎಲ್ಲ ರಾಷ್ಟ್ರಗಳ ಸಾರ್ವಭೌಮತ್ವವನ್ನು ಕಾಪಾಡುವುದೇ ನಮ್ಮೆಲ್ಲರ ಆಶಯವಾಗಿದೆ ಎಂದು “ಶೇರ್ಡ್ ವ್ಯಾಲ್ಯುವ್ಸ್, ಕಾಮನ್ ಡೆಸ್ಟಿನಿ’ ಎಂಬ ತಲೆಬರಹದಲ್ಲಿ ಪ್ರಕಟವಾದ ಲೇಖನದಲ್ಲಿ ಪ್ರಧಾನಿ ಉಲ್ಲೇಖಿಸಿದ್ದಾರೆ.

ಅಚ್ಚರಿಯ ಸಂಗತಿ ಏನೆಂದರೆ, ಆಸಿಯಾನ್ ರಾಷ್ಟ್ರಗಳೆಲ್ಲವೂ ಒಗ್ಗೂಡಿ ವಿಶ್ವದ ಪ್ರಮುಖ ವ್ಯಾಪಾರ ನಡೆಸುವ ರಾಷ್ಟ್ರಗಳ ಗುಂಪಿನಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಭಾರತವೊಂದೇ ಸೇರಿದರೂ 7ನೇ ಸ್ಥಾನ ಪಡೆಯುತ್ತದೆ. ವಿಶ್ವದಲ್ಲಿ ಭಾರತ ಪ್ರಮುಖ ವ್ಯಾಪಾರ ಕೇಂದ್ರವಾಗಿದೆ ಎಂದು ಹೊಗಳಿದ್ದಾರೆ.

ಅಷ್ಟೇ ಅಲ್ಲ, ದಕ್ಷಿಣ ಏಷ್ಯಾ, ಅಂತಾರಾಷ್ಟ್ರೀಯ ಸಂಬಂಧ, ವ್ಯಾಪಾರ ಸೇರಿ ಹಲವು ವಿಷಯಗಳ ಕುರಿತು ಪ್ರಧಾನಿ ಮೋದಿ ಅವರು ತಮ್ಮ ಲೇಖನದಲ್ಲಿ ಬರೆದಿದ್ದಾರೆ.

 

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search